ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm