ಬ್ರೇಕಿಂಗ್ ನ್ಯೂಸ್
14-11-22 06:17 pm Mangalore Correspondent ಕರಾವಳಿ
ಮಂಗಳೂರು, ನ.14: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಮಾಡಿದ್ದ ಆಪರೇಶನ್ ಕಮಲ ಯತ್ನ ಪ್ರಕರಣದಲ್ಲಿ ತೆಲಂಗಾಣ ವಿಶೇಷ ಪೊಲೀಸ್ ತನಿಖಾ ತಂಡವು ಪುತ್ತೂರಿನಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದೆ. ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ರಾಮಚಂದ್ರ ಭಾರತಿ ಎಂಬಾತ ಪುತ್ತೂರಿನಲ್ಲಿ ಮನೆ ಹೊಂದಿದ್ದು, ತೆಲಂಗಾಣ ಪೊಲೀಸರು ದಾಳಿ ನಡೆಸಿದ್ದಾರೆ.
ತೆಲಂಗಾಣದಲ್ಲಿ ನಾಲ್ವರು ಶಾಸಕರನ್ನು ಸೆಳೆಯಲು 250 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಅನ್ನುವುದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಕರಣದಲ್ಲಿ ಶಾಸಕರೊಬ್ಬರ ಮನೆಗೆ ಮೂವರ ತಂಡ ತೆರಳಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು. ಬಿಜೆಪಿ ಏಜಂಟರು ಎನ್ನಲಾದ ಫರೀದಾಬಾದ್ ನಲ್ಲಿ ನೆಲೆಸಿದ್ದ ರಾಮಚಂದ್ರ ಭಾರತಿ, ಉದ್ಯಮಿ ನಂದಕುಮಾರ್ ಮತ್ತು ತಿರುಪತಿಯ ಸಿಂಹಯ್ಯಾಜಿ ಸ್ವಾಮಿ ಎಂಬವರು ಪೊಲೀಸರ ಬಂಧನಕ್ಕೊಳಗಾಗಿದ್ದರು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.

ಇದೀಗ ಹರ್ಯಾಣ, ಕೇರಳ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ತೆಲಂಗಾಣ ಪೊಲೀಸರು ಆರೋಪಿಗಳಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ರಾಮಚಂದ್ರ ಭಾರತಿ ಮನೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ಈ ಮೂವರು ಟಿಆರ್ ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಮನೆಗೆ ತೆರಳಿದ್ದು, ನೀವು ಬಿಜೆಪಿ ಸೇರಿದರೆ ನೂರು ಕೋಟಿ ನೀಡುವುದಾಗಿ ಆಫರ್ ನೀಡಿದ್ದರು. ಅಲ್ಲದೆ, ಇತರ ಮೂವರನ್ನು ಬಿಜೆಪಿಗೆ ಕರೆತಂದರೆ ತಲಾ 50 ಕೋಟಿ ನೀಡುವುದಾಗಿ ಹೇಳಿದ್ದರು ಎಂಬುದಾಗಿ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ರೋಹಿತ್ ರೆಡ್ಡಿ ಮನೆಯಲ್ಲಿ ಇರುವಾಗಲೇ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದರು.

ಈ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ವಿಡಿಯೋ ಬಿಡುಗಡೆ ಮಾಡಿ ಆಪರೇಶನ್ ಕಮಲಕ್ಕೆ ಯತ್ನಿಸಿದ್ದ ಬಿಜೆಪಿ ಏಜಂಟರು ಎಂಬುದಾಗಿ ಆರೋಪ ಮಾಡಿದ್ದರು. ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲವೆಂದು ತೆಲಂಗಾಣ ಬಿಜೆಪಿ ಘಟಕ ಹೇಳಿಕೊಂಡಿತ್ತು. ಆದರೆ ಪೊಲೀಸರು ಆರೋಪಿಗಳ ಸಂಪರ್ಕದ ಬಗ್ಗೆ ತನಿಖೆ ನಡೆಸುತ್ತಿದ್ದು, ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದೆ.
Simultaneous searches were launched by Telangana police at seven places across four states including Puttur in Karnataka on Saturday in connection with Poachgate, which allegedly involved big money to engineer defections.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am