ಬ್ರೇಕಿಂಗ್ ನ್ಯೂಸ್
14-11-22 06:17 pm Mangalore Correspondent ಕರಾವಳಿ
ಮಂಗಳೂರು, ನ.14: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಮಾಡಿದ್ದ ಆಪರೇಶನ್ ಕಮಲ ಯತ್ನ ಪ್ರಕರಣದಲ್ಲಿ ತೆಲಂಗಾಣ ವಿಶೇಷ ಪೊಲೀಸ್ ತನಿಖಾ ತಂಡವು ಪುತ್ತೂರಿನಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದೆ. ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ರಾಮಚಂದ್ರ ಭಾರತಿ ಎಂಬಾತ ಪುತ್ತೂರಿನಲ್ಲಿ ಮನೆ ಹೊಂದಿದ್ದು, ತೆಲಂಗಾಣ ಪೊಲೀಸರು ದಾಳಿ ನಡೆಸಿದ್ದಾರೆ.
ತೆಲಂಗಾಣದಲ್ಲಿ ನಾಲ್ವರು ಶಾಸಕರನ್ನು ಸೆಳೆಯಲು 250 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಅನ್ನುವುದು ಇತ್ತೀಚೆಗೆ ದೊಡ್ಡ ಸುದ್ದಿಯಾಗಿತ್ತು. ಪ್ರಕರಣದಲ್ಲಿ ಶಾಸಕರೊಬ್ಬರ ಮನೆಗೆ ಮೂವರ ತಂಡ ತೆರಳಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿತ್ತು. ಬಿಜೆಪಿ ಏಜಂಟರು ಎನ್ನಲಾದ ಫರೀದಾಬಾದ್ ನಲ್ಲಿ ನೆಲೆಸಿದ್ದ ರಾಮಚಂದ್ರ ಭಾರತಿ, ಉದ್ಯಮಿ ನಂದಕುಮಾರ್ ಮತ್ತು ತಿರುಪತಿಯ ಸಿಂಹಯ್ಯಾಜಿ ಸ್ವಾಮಿ ಎಂಬವರು ಪೊಲೀಸರ ಬಂಧನಕ್ಕೊಳಗಾಗಿದ್ದರು. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.

ಇದೀಗ ಹರ್ಯಾಣ, ಕೇರಳ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ತೆಲಂಗಾಣ ಪೊಲೀಸರು ಆರೋಪಿಗಳಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ರಾಮಚಂದ್ರ ಭಾರತಿ ಮನೆ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ಈ ಮೂವರು ಟಿಆರ್ ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಮನೆಗೆ ತೆರಳಿದ್ದು, ನೀವು ಬಿಜೆಪಿ ಸೇರಿದರೆ ನೂರು ಕೋಟಿ ನೀಡುವುದಾಗಿ ಆಫರ್ ನೀಡಿದ್ದರು. ಅಲ್ಲದೆ, ಇತರ ಮೂವರನ್ನು ಬಿಜೆಪಿಗೆ ಕರೆತಂದರೆ ತಲಾ 50 ಕೋಟಿ ನೀಡುವುದಾಗಿ ಹೇಳಿದ್ದರು ಎಂಬುದಾಗಿ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ರೋಹಿತ್ ರೆಡ್ಡಿ ಮನೆಯಲ್ಲಿ ಇರುವಾಗಲೇ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದರು.

ಈ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ವಿಡಿಯೋ ಬಿಡುಗಡೆ ಮಾಡಿ ಆಪರೇಶನ್ ಕಮಲಕ್ಕೆ ಯತ್ನಿಸಿದ್ದ ಬಿಜೆಪಿ ಏಜಂಟರು ಎಂಬುದಾಗಿ ಆರೋಪ ಮಾಡಿದ್ದರು. ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲವೆಂದು ತೆಲಂಗಾಣ ಬಿಜೆಪಿ ಘಟಕ ಹೇಳಿಕೊಂಡಿತ್ತು. ಆದರೆ ಪೊಲೀಸರು ಆರೋಪಿಗಳ ಸಂಪರ್ಕದ ಬಗ್ಗೆ ತನಿಖೆ ನಡೆಸುತ್ತಿದ್ದು, ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದೆ.
Simultaneous searches were launched by Telangana police at seven places across four states including Puttur in Karnataka on Saturday in connection with Poachgate, which allegedly involved big money to engineer defections.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm