ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm