ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am