ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm