ಬ್ರೇಕಿಂಗ್ ನ್ಯೂಸ್
15-11-22 07:15 pm Mangalore Correspondent ಕರಾವಳಿ
ಉಳ್ಳಾಲ, ನ.15 : ಜಗತ್ತಿನಾದ್ಯಂತ ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು.
ಅವರಿಂದು ಕಲ್ಲಾಪಿನ ಬುರ್ದುಗೋಳಿಯ ಗುಳಿಗ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂಬ, ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.


ಈ ವೇಳೆ ಮಾತನಾಡಿದ ಸಪ್ತಮಿ ಅವರು ವಿಶ್ವದಾದ್ಯಂತ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚೆಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ. ಈಗಾಗಲೇ ಸಿನಿಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಬಂದಿದ್ದು ಸ್ಕ್ರಿಪ್ಟ್ ರೀಡಿಂಗ್ ನಡೀತಾ ಇದೆ. ಜನರ ಪ್ರೀತಿಯಿಂದ ಜಗತ್ತಿನಾದ್ಯಂತ ಕಾಂತಾರ ಹೌಸ್ ಫುಲ್ ಆಗಿ ಓಡುತ್ತಿದ್ದು ತುಳುನಾಡಿನ ದೈವಗಳ ಆಶೀರ್ವಾದವೇ ಚಿತ್ರಕ್ಕೆ ಶ್ರೀರಕ್ಷೆ ಎಂದರು.


ಬಳಿಕ ಅವರು ಕುತ್ತಾರಿನ ಕೊರಗಜ್ಜನ ಆದಿಸ್ಥಳಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಸಪ್ತಮಿ ಗೌಡರ ತಾಯಿ ಶಾಂತ, ನಟ ಸನಿಲ್ ಗುರು, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಪ್ರಮುಖರಾದ ಪ್ರವೀಣ್ ಎಸ್ .ಕುಂಪಲ, ಪುರುಷೋತ್ತಮ ಕಲ್ಲಾಪು, ಕಿಶೋರ್ ಕುಂಪಲ, ಕೌಶಿಕ್ ಸೇವಂತಿ ಗುಡ್ಡೆ, ಗೀತೇಶ್ ಮೊದಲಾದವರು ಜತೆಗಿದ್ದರು.
Kantara movie actress Sapthami Gowda visits koraga daiva temple at Ullal in Mangalore. Says success of the Kantara movie is only because of Daiva.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am