ಬ್ರೇಕಿಂಗ್ ನ್ಯೂಸ್
15-11-22 07:15 pm Mangalore Correspondent ಕರಾವಳಿ
ಉಳ್ಳಾಲ, ನ.15 : ಜಗತ್ತಿನಾದ್ಯಂತ ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು.
ಅವರಿಂದು ಕಲ್ಲಾಪಿನ ಬುರ್ದುಗೋಳಿಯ ಗುಳಿಗ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂಬ, ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.


ಈ ವೇಳೆ ಮಾತನಾಡಿದ ಸಪ್ತಮಿ ಅವರು ವಿಶ್ವದಾದ್ಯಂತ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚೆಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ. ಈಗಾಗಲೇ ಸಿನಿಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಬಂದಿದ್ದು ಸ್ಕ್ರಿಪ್ಟ್ ರೀಡಿಂಗ್ ನಡೀತಾ ಇದೆ. ಜನರ ಪ್ರೀತಿಯಿಂದ ಜಗತ್ತಿನಾದ್ಯಂತ ಕಾಂತಾರ ಹೌಸ್ ಫುಲ್ ಆಗಿ ಓಡುತ್ತಿದ್ದು ತುಳುನಾಡಿನ ದೈವಗಳ ಆಶೀರ್ವಾದವೇ ಚಿತ್ರಕ್ಕೆ ಶ್ರೀರಕ್ಷೆ ಎಂದರು.


ಬಳಿಕ ಅವರು ಕುತ್ತಾರಿನ ಕೊರಗಜ್ಜನ ಆದಿಸ್ಥಳಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಸಪ್ತಮಿ ಗೌಡರ ತಾಯಿ ಶಾಂತ, ನಟ ಸನಿಲ್ ಗುರು, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಪ್ರಮುಖರಾದ ಪ್ರವೀಣ್ ಎಸ್ .ಕುಂಪಲ, ಪುರುಷೋತ್ತಮ ಕಲ್ಲಾಪು, ಕಿಶೋರ್ ಕುಂಪಲ, ಕೌಶಿಕ್ ಸೇವಂತಿ ಗುಡ್ಡೆ, ಗೀತೇಶ್ ಮೊದಲಾದವರು ಜತೆಗಿದ್ದರು.
Kantara movie actress Sapthami Gowda visits koraga daiva temple at Ullal in Mangalore. Says success of the Kantara movie is only because of Daiva.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm