ಬ್ರೇಕಿಂಗ್ ನ್ಯೂಸ್
15-11-22 09:51 pm Mangalore Correspondent ಕರಾವಳಿ
ಮಂಗಳೂರು, ನ.15 : ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದರೂ ಸುರತ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದು ಧರಣಿ ಮುಂದುವರಿಸಿದ್ದಾರೆ. ಮಂಗಳವಾರ 19ನೇ ದಿನವೂ ಧರಣಿ ನಡೆದಿದ್ದು ಹಗಲು ರಾತ್ರಿ ಧರಣಿಗೆ ಮತ್ತಷ್ಟು ಜನರು ಬೆಂಬಲ ನೀಡಿದ್ದಾರೆ.
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ "ಏಳು ವರ್ಷಗಳ ಕಾಲ ನಿಯಮ ಬಾಹಿರ ಟೋಲ್ ಕೇಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಕ್ಕೆ ಅವಕಾಶ ಒದಗಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಈಗ ತರಾತುರಿಯಲ್ಲಿ ಪ್ರಧಾನಿ, ಹೆದ್ದಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಟೋಲ್ ಗೇಟ್ ಮುಚ್ಚಿದರ ಹಿರಿಮೆ ತನ್ನದಾಗಿಸಿಕೊಳ್ಳುವ ಆಸಕ್ತಿ ಅಕ್ರಮ ಟೋಲ್ ಗೇಟ್ ಮುಚ್ಚುವುದರಲ್ಲಿ ಬಿಜೆಪಿ ಸಂಸದ, ಶಾಸಕರುಗಳಿಗೆ ಇಲ್ಲ. ಅಧಿಸೂಚನೆ ಹೊರಟು ಮೂರು ದಿನ ಕಳೆದರೂ ಟೋಲ್ ಸಂಗ್ರಹ ಅಬಾಧಿತವಾಗಿ ನಡೆದಿದೆ. ಇದು ಬಿಜೆಪಿ ಮುಖಂಡತ್ವದ ನೈಜ ಮುಖ ಎಂದು ಎಂದು ಆರೋಪಿಸಿದರು. ಟೋಲ್ ಕೇಂದ್ರ ಮುಚ್ಚದೆ ಹಗಲು ರಾತ್ರಿ ಧರಣಿ ಕೊನೆಗೊಳಿಸುವ ಪ್ರಶ್ನೆಯೇ ಇಲ್ಲ. ಅಧಿಸೂಚನೆ ಆಧಾರದಲ್ಲಿ ಜಿಲ್ಲಾಡಳಿತ ತಕ್ಷಣ ಟೋಲ್ ಸಂಗ್ರಹ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಿಲೀನದ ಹೆಸರಿನಲ್ಲಿ ಹೆಜಮಾಡಿಯ ನವಯುಗ್ ಟೋಲ್ ಪ್ಲಾಜಾದಲ್ಲಿ ಟೋಲ್ ದರವನ್ನು ವಿಪರೀತ ಹೆಚ್ಚಿಸಿ ಸುಲಿಗೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಅವಿಭಜಿತ ಜಿಲ್ಲೆಯಲ್ಲಿ ಜನ ಹೋರಾಟ ಭುಗಿಲೇಳಲಿದೆ. ಅದಕ್ಕೆ ಬಿಜೆಪಿ ಶಾಸಕರು ಅವಕಾಶ ಮಾಡಿಕೊಡುವುದು ಬೇಡ ಎಂದು ಎಚ್ಚರಿಸಿದರು. ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಫಾದರ್ ವಿಲಿಯಂ ಮಾರ್ಟಿಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಹುಲ್ ಹಮೀದ್, ರಾಲ್ಪಿ ಡಿಸೋಜ, ಮನಪಾ ಸದಸ್ಯ ಅಬ್ದುಲ್ ರವೂಫ್, ನ್ಯಾಯವಾದಿ ಯಶವಂತ ಮರೋಳಿ, ಕನಕದಾಸ ಕೂಳೂರು, ಹಮೀದ್ ಹರೇಕಳ, ರಫೀಕ್ ಹರೇಕಳ, ದಲಿತ ನಾಯಕರಾದ ರಘು ಎಕ್ಕಾರು, ಶೇಖರ ಹೆಜಮಾಡಿ, ಸಹಬಾಳ್ವೆ ಉಡುಪಿಯ ಜ್ಯೋತಿ ಮೆನನ್, ತಸ್ರೀನ್ ಅರ಼ಾ, ಶೇಖಬ್ಬ ಕೋಟೆ, ಪ್ರತಿಭಾ ಕುಳಾಯಿ, ಹೋರಾಟ ಸಮಿತಿಯ ಪ್ರಮುಖರಾದ ಬಿ ಕೆ ಇಮ್ತಿಯಾಜ್, ರಾಘವೇಂದ್ರ ರಾವ್, ರಮೇಶ್ ಟಿ ಎನ್, ಶ್ರೀನಾಥ್ ಕುಲಾಲ್, ಮುಹಮ್ಮದ್ ಕುಂಜತ್ತಬೈಲ್, ಮಂಜುಳಾ ನಾಯಕ್, ಸಂತೋಷ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
Mangalore Protest against Hejamady toll to continue if toll of surathkal toll merged warns protesters.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm