ಬ್ರೇಕಿಂಗ್ ನ್ಯೂಸ್
15-11-22 09:51 pm Mangalore Correspondent ಕರಾವಳಿ
ಮಂಗಳೂರು, ನ.15 : ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದರೂ ಸುರತ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದು ಧರಣಿ ಮುಂದುವರಿಸಿದ್ದಾರೆ. ಮಂಗಳವಾರ 19ನೇ ದಿನವೂ ಧರಣಿ ನಡೆದಿದ್ದು ಹಗಲು ರಾತ್ರಿ ಧರಣಿಗೆ ಮತ್ತಷ್ಟು ಜನರು ಬೆಂಬಲ ನೀಡಿದ್ದಾರೆ.
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ "ಏಳು ವರ್ಷಗಳ ಕಾಲ ನಿಯಮ ಬಾಹಿರ ಟೋಲ್ ಕೇಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಕ್ಕೆ ಅವಕಾಶ ಒದಗಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಈಗ ತರಾತುರಿಯಲ್ಲಿ ಪ್ರಧಾನಿ, ಹೆದ್ದಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಟೋಲ್ ಗೇಟ್ ಮುಚ್ಚಿದರ ಹಿರಿಮೆ ತನ್ನದಾಗಿಸಿಕೊಳ್ಳುವ ಆಸಕ್ತಿ ಅಕ್ರಮ ಟೋಲ್ ಗೇಟ್ ಮುಚ್ಚುವುದರಲ್ಲಿ ಬಿಜೆಪಿ ಸಂಸದ, ಶಾಸಕರುಗಳಿಗೆ ಇಲ್ಲ. ಅಧಿಸೂಚನೆ ಹೊರಟು ಮೂರು ದಿನ ಕಳೆದರೂ ಟೋಲ್ ಸಂಗ್ರಹ ಅಬಾಧಿತವಾಗಿ ನಡೆದಿದೆ. ಇದು ಬಿಜೆಪಿ ಮುಖಂಡತ್ವದ ನೈಜ ಮುಖ ಎಂದು ಎಂದು ಆರೋಪಿಸಿದರು. ಟೋಲ್ ಕೇಂದ್ರ ಮುಚ್ಚದೆ ಹಗಲು ರಾತ್ರಿ ಧರಣಿ ಕೊನೆಗೊಳಿಸುವ ಪ್ರಶ್ನೆಯೇ ಇಲ್ಲ. ಅಧಿಸೂಚನೆ ಆಧಾರದಲ್ಲಿ ಜಿಲ್ಲಾಡಳಿತ ತಕ್ಷಣ ಟೋಲ್ ಸಂಗ್ರಹ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ವಿಲೀನದ ಹೆಸರಿನಲ್ಲಿ ಹೆಜಮಾಡಿಯ ನವಯುಗ್ ಟೋಲ್ ಪ್ಲಾಜಾದಲ್ಲಿ ಟೋಲ್ ದರವನ್ನು ವಿಪರೀತ ಹೆಚ್ಚಿಸಿ ಸುಲಿಗೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಅವಿಭಜಿತ ಜಿಲ್ಲೆಯಲ್ಲಿ ಜನ ಹೋರಾಟ ಭುಗಿಲೇಳಲಿದೆ. ಅದಕ್ಕೆ ಬಿಜೆಪಿ ಶಾಸಕರು ಅವಕಾಶ ಮಾಡಿಕೊಡುವುದು ಬೇಡ ಎಂದು ಎಚ್ಚರಿಸಿದರು. ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಫಾದರ್ ವಿಲಿಯಂ ಮಾರ್ಟಿಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಹುಲ್ ಹಮೀದ್, ರಾಲ್ಪಿ ಡಿಸೋಜ, ಮನಪಾ ಸದಸ್ಯ ಅಬ್ದುಲ್ ರವೂಫ್, ನ್ಯಾಯವಾದಿ ಯಶವಂತ ಮರೋಳಿ, ಕನಕದಾಸ ಕೂಳೂರು, ಹಮೀದ್ ಹರೇಕಳ, ರಫೀಕ್ ಹರೇಕಳ, ದಲಿತ ನಾಯಕರಾದ ರಘು ಎಕ್ಕಾರು, ಶೇಖರ ಹೆಜಮಾಡಿ, ಸಹಬಾಳ್ವೆ ಉಡುಪಿಯ ಜ್ಯೋತಿ ಮೆನನ್, ತಸ್ರೀನ್ ಅರ಼ಾ, ಶೇಖಬ್ಬ ಕೋಟೆ, ಪ್ರತಿಭಾ ಕುಳಾಯಿ, ಹೋರಾಟ ಸಮಿತಿಯ ಪ್ರಮುಖರಾದ ಬಿ ಕೆ ಇಮ್ತಿಯಾಜ್, ರಾಘವೇಂದ್ರ ರಾವ್, ರಮೇಶ್ ಟಿ ಎನ್, ಶ್ರೀನಾಥ್ ಕುಲಾಲ್, ಮುಹಮ್ಮದ್ ಕುಂಜತ್ತಬೈಲ್, ಮಂಜುಳಾ ನಾಯಕ್, ಸಂತೋಷ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
Mangalore Protest against Hejamady toll to continue if toll of surathkal toll merged warns protesters.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm