ಬ್ರೇಕಿಂಗ್ ನ್ಯೂಸ್
15-11-22 09:51 pm Mangalore Correspondent ಕರಾವಳಿ
ಮಂಗಳೂರು, ನ.15 : ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದರೂ ಸುರತ್ಕಲ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಹೋರಾಟಗಾರರು ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಪಟ್ಟು ಹಿಡಿದಿದ್ದು ಧರಣಿ ಮುಂದುವರಿಸಿದ್ದಾರೆ. ಮಂಗಳವಾರ 19ನೇ ದಿನವೂ ಧರಣಿ ನಡೆದಿದ್ದು ಹಗಲು ರಾತ್ರಿ ಧರಣಿಗೆ ಮತ್ತಷ್ಟು ಜನರು ಬೆಂಬಲ ನೀಡಿದ್ದಾರೆ.
ಸಭೆಯಲ್ಲಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ "ಏಳು ವರ್ಷಗಳ ಕಾಲ ನಿಯಮ ಬಾಹಿರ ಟೋಲ್ ಕೇಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಕ್ಕೆ ಅವಕಾಶ ಒದಗಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಈಗ ತರಾತುರಿಯಲ್ಲಿ ಪ್ರಧಾನಿ, ಹೆದ್ದಾರಿ ಸಚಿವರಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಟೋಲ್ ಗೇಟ್ ಮುಚ್ಚಿದರ ಹಿರಿಮೆ ತನ್ನದಾಗಿಸಿಕೊಳ್ಳುವ ಆಸಕ್ತಿ ಅಕ್ರಮ ಟೋಲ್ ಗೇಟ್ ಮುಚ್ಚುವುದರಲ್ಲಿ ಬಿಜೆಪಿ ಸಂಸದ, ಶಾಸಕರುಗಳಿಗೆ ಇಲ್ಲ. ಅಧಿಸೂಚನೆ ಹೊರಟು ಮೂರು ದಿನ ಕಳೆದರೂ ಟೋಲ್ ಸಂಗ್ರಹ ಅಬಾಧಿತವಾಗಿ ನಡೆದಿದೆ. ಇದು ಬಿಜೆಪಿ ಮುಖಂಡತ್ವದ ನೈಜ ಮುಖ ಎಂದು ಎಂದು ಆರೋಪಿಸಿದರು. ಟೋಲ್ ಕೇಂದ್ರ ಮುಚ್ಚದೆ ಹಗಲು ರಾತ್ರಿ ಧರಣಿ ಕೊನೆಗೊಳಿಸುವ ಪ್ರಶ್ನೆಯೇ ಇಲ್ಲ. ಅಧಿಸೂಚನೆ ಆಧಾರದಲ್ಲಿ ಜಿಲ್ಲಾಡಳಿತ ತಕ್ಷಣ ಟೋಲ್ ಸಂಗ್ರಹ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ವಿಲೀನದ ಹೆಸರಿನಲ್ಲಿ ಹೆಜಮಾಡಿಯ ನವಯುಗ್ ಟೋಲ್ ಪ್ಲಾಜಾದಲ್ಲಿ ಟೋಲ್ ದರವನ್ನು ವಿಪರೀತ ಹೆಚ್ಚಿಸಿ ಸುಲಿಗೆಯನ್ನು ಅಲ್ಲಿಗೆ ಸ್ಥಳಾಂತರಿಸಿದರೆ ಅವಿಭಜಿತ ಜಿಲ್ಲೆಯಲ್ಲಿ ಜನ ಹೋರಾಟ ಭುಗಿಲೇಳಲಿದೆ. ಅದಕ್ಕೆ ಬಿಜೆಪಿ ಶಾಸಕರು ಅವಕಾಶ ಮಾಡಿಕೊಡುವುದು ಬೇಡ ಎಂದು ಎಚ್ಚರಿಸಿದರು. ಧರಣಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಫಾದರ್ ವಿಲಿಯಂ ಮಾರ್ಟಿಸ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಾಹುಲ್ ಹಮೀದ್, ರಾಲ್ಪಿ ಡಿಸೋಜ, ಮನಪಾ ಸದಸ್ಯ ಅಬ್ದುಲ್ ರವೂಫ್, ನ್ಯಾಯವಾದಿ ಯಶವಂತ ಮರೋಳಿ, ಕನಕದಾಸ ಕೂಳೂರು, ಹಮೀದ್ ಹರೇಕಳ, ರಫೀಕ್ ಹರೇಕಳ, ದಲಿತ ನಾಯಕರಾದ ರಘು ಎಕ್ಕಾರು, ಶೇಖರ ಹೆಜಮಾಡಿ, ಸಹಬಾಳ್ವೆ ಉಡುಪಿಯ ಜ್ಯೋತಿ ಮೆನನ್, ತಸ್ರೀನ್ ಅರ಼ಾ, ಶೇಖಬ್ಬ ಕೋಟೆ, ಪ್ರತಿಭಾ ಕುಳಾಯಿ, ಹೋರಾಟ ಸಮಿತಿಯ ಪ್ರಮುಖರಾದ ಬಿ ಕೆ ಇಮ್ತಿಯಾಜ್, ರಾಘವೇಂದ್ರ ರಾವ್, ರಮೇಶ್ ಟಿ ಎನ್, ಶ್ರೀನಾಥ್ ಕುಲಾಲ್, ಮುಹಮ್ಮದ್ ಕುಂಜತ್ತಬೈಲ್, ಮಂಜುಳಾ ನಾಯಕ್, ಸಂತೋಷ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
Mangalore Protest against Hejamady toll to continue if toll of surathkal toll merged warns protesters.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm