ಬ್ರೇಕಿಂಗ್ ನ್ಯೂಸ್
19-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.19: ನಗರದ ಕಂಕನಾಡಿ ನಾಗುರಿ ಪೊಲೀಸ್ ಠಾಣೆ ಬಳಿಯಲ್ಲೇ ನಿಗೂಢ ಸ್ಫೋಟ ಆಗಿದೆ. ಆಟೋ ಚಲಿಸುತ್ತಿದ್ದಾಗಲೇ ಒಳಗಿನಿಂದ ಸ್ಫೋಟ ಆಗಿದ್ದು, ಆಟೋ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ. ಬ್ಲಾಸ್ಟ್ ಯಾವ ರೀತಿಯದ್ದು, ಹೇಗೆ ಸಂಭವಿಸಿದೆ ಎನ್ನುವುದು ದೃಢಪಟ್ಟಿಲ್ಲ.
ಆಟೋ ನಾಗುರಿಯಿಂದ ಹೆದ್ದಾರಿಯಲ್ಲಿ ಪಂಪ್ವೆಲ್ ಕಡೆಗೆ ಚಲಿಸುತ್ತಿತ್ತು. ಸಂಜೆ 5.30ರ ವೇಳೆಗೆ ಘಟನೆ ಸಂಭವಿಸಿದ್ದು, ಆಟೋ ಚಲಿಸುತ್ತಿದ್ದಾಗಲೇ ಹಿಂದೆ ಕುಳಿತಿದ್ದ ವ್ಯಕ್ತಿಯ ಜೊತೆಗಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಆತನ ಜೊತೆಗೆ ಕುಕ್ಕರ್ ಇದ್ದಿರುವುದು ಶಂಕೆಗೆ ಕಾರಣವಾಗಿದೆ. ಇಬ್ಬರು ಗಾಯಾಳುಗಳನ್ನು ಕಂಕನಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಗುರಿಯಿಂದ ಆಟೋ ಹತ್ತಿದ್ದ ಪ್ರಯಾಣಿಕನ ಕೈಯಲ್ಲಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿಗೂ ಬೆಂಕಿ ತಗಲಿದೆ. ಆಟೋ ಒಳಗಡೆ ಸುಟ್ಟು ಹೋಗಿದೆ. ಹಿಂದಿನಿಂದ ಬೆಂಕಿ ಕಾಣಿಸಿದ್ದಾಗಿ ಆಟೋ ಚಾಲಕ ಹೇಳಿದ್ದಾನೆ. ಬೆಂಕಿ ಹೇಗೆ ಹತ್ತಿಕೊಂಡಿದೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ತಜ್ಞರು ಬಂದು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.






ಬ್ಲಾಸ್ಟ್ ಘಟನೆ ಸ್ಥಳದಲ್ಲಿದ್ದ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಾರೀ ಹೊಗೆ ಕಾಣಿಸಿಕೊಂಡಿದೆ, ಜನರು ಗಾಬರಿಗೊಂಡು ಸ್ಥಳದತ್ತ ಓಡಿದ್ದಾರೆ. ಬೆಂಕಿ ಹತ್ತಿಕೊಂಡು ಏನೋ ಸ್ಫೋಟ ಆದ ರೀತಿ ಕಂಡುಬಂದಿದೆ. ಆಟೋ ರಿಕ್ಷಾ ಒಳಗಡೆ ಹಳೆಯ ಕುಕ್ಕರ್ ಪತ್ತೆಯಾಗಿದೆ. ಹೇಗೆ ಸ್ಫೋಟ ಸಂಭವಿಸಿದೆ ಅನ್ನುವುದು ಇನ್ನೂ ದೃಢಪಟ್ಟಿಲ್ಲ. ಯಾವುದಾದ್ರೂ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದನೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿದ್ದರಿಂದ ಆತಂಕ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.
Autorickshaw minor explosion at Naguri in Mangalore, catches fire passenger suffers injury, driver escapes unhurt, police are now investigating the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm