ಬ್ರೇಕಿಂಗ್ ನ್ಯೂಸ್
13-10-20 07:13 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಹಿಂದುತ್ವದ ಬಗ್ಗೆ ಬಿಜೆಪಿಗೇನು ಗೊತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ನಾಯಕರು ಪ್ರಶ್ನಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ಶೇಖರ ಕುಕ್ಕೇಡಿ ಮತ್ತು ರಘುರಾಜ್ ಕದ್ರಿ, ಮಿಥುನ್ ರೈ ನಿಜವಾದ ಹಿಂದು ನಾಯಕ. ಅವರು ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ನೆರವು ನೀಡಿದ್ದಾರೆ. ೧೫೦ಕ್ಕೂ ಹೆಚ್ಚು ಗೋವುಗಳನ್ನ ದಾನ ಮಾಡಿದ್ದಾರೆ. ಹಾಗಾಗಿ ಮಿಥುನ್ ರೈ ಹಿಂದುತ್ವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ದಲಿತ ಯುವತಿಯರ ಅತ್ಯಾಚಾರ, ಕೊಲೆ ಕೃತ್ಯಗಳು ನಡೆಯುತ್ತಲೇ ಇದೆ. ಅಲ್ಲಿನ ಮುಖ್ಯಮಂತ್ರಿ ವೈಫಲ್ಯದ ಬಗ್ಗೆ ಮಿಥುನ್ ರೈ ಮಾತನಾಡಿದ್ದಾರೆ ವಿನಾ ಯಾವುದೇ ಸಮುದಾಯವನ್ನು ಅವಮಾನಿಸುವ ಹೇಳಿಕೆ ನೀಡಿಲ್ಲ. ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಮೇಲೆ ದೈಹಿಕ ಹಲ್ಲೆಗಳಾದಾಗ ಮಾತನಾಡದ ಬಿಜೆಪಿಗರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರ ಆಡಳಿತ ವೈಫಲ್ಯದ ವಿರುದ್ಧ ಧ್ವನಿ ಎತ್ತಿರುವುದಕ್ಕೆ ಅಪಸ್ವರ ಎತ್ತುವುದು ಯಾವ ನ್ಯಾಯ ಎಂದು ಕಿಡಿಕಾರಿದರು. ಜಿಲ್ಲೆಯ ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ದಲಿತರ ಮೇಲಾಗುವ ಅನ್ಯಾಯದ ವಿರುದ್ಧ ಮೊದಲು ಧ್ವನಿ ಎತ್ತಲಿ. ದೇಶದ ನಲವತ್ತು ಕೋಟಿ ದಲಿತರಿಗೆ ರಕ್ಷಣೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯ ದೇಶಾದ್ಯಂತ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ಅವುಗಳಲ್ಲಿ ಕೆಲವು ಪ್ರಕರಣ ಮಾತ್ರ ಬೆಳಕಿಗೆ ಬರುತ್ತಿದೆ ಎಂದು ವಿಷಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಜನೀಶ್ ಕಾಪಿಕಾಡ್, ರೋಹಿತ್ ಉಳ್ಳಾಲ್, ಹೊನ್ನಯ್ಯ , ಪ್ರೇಮನಾಥ್ ಬಲ್ಲಾಳ್ಬಾಗ್ , ವಿಜಯಲಕ್ಷ್ಮಿ, ದಿನೇಶ್, ಪ್ರಭಾಕರ, ಚಂದ್ರಿಕಾ ಉಪಸ್ಥಿತರಿದ್ದರು.
What Power does BJP have to question about Youth Congress Leader Mithun Rai's Hindutva, slams youth congress members here in Mangalore at a press meet held at congress Bhavan office here on 13 Tuesday, October 2020.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm