ಬ್ರೇಕಿಂಗ್ ನ್ಯೂಸ್
13-10-20 07:13 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಹಿಂದುತ್ವದ ಬಗ್ಗೆ ಬಿಜೆಪಿಗೇನು ಗೊತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ನಾಯಕರು ಪ್ರಶ್ನಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ಶೇಖರ ಕುಕ್ಕೇಡಿ ಮತ್ತು ರಘುರಾಜ್ ಕದ್ರಿ, ಮಿಥುನ್ ರೈ ನಿಜವಾದ ಹಿಂದು ನಾಯಕ. ಅವರು ಅನೇಕ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ನೆರವು ನೀಡಿದ್ದಾರೆ. ೧೫೦ಕ್ಕೂ ಹೆಚ್ಚು ಗೋವುಗಳನ್ನ ದಾನ ಮಾಡಿದ್ದಾರೆ. ಹಾಗಾಗಿ ಮಿಥುನ್ ರೈ ಹಿಂದುತ್ವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ದಲಿತ ಯುವತಿಯರ ಅತ್ಯಾಚಾರ, ಕೊಲೆ ಕೃತ್ಯಗಳು ನಡೆಯುತ್ತಲೇ ಇದೆ. ಅಲ್ಲಿನ ಮುಖ್ಯಮಂತ್ರಿ ವೈಫಲ್ಯದ ಬಗ್ಗೆ ಮಿಥುನ್ ರೈ ಮಾತನಾಡಿದ್ದಾರೆ ವಿನಾ ಯಾವುದೇ ಸಮುದಾಯವನ್ನು ಅವಮಾನಿಸುವ ಹೇಳಿಕೆ ನೀಡಿಲ್ಲ. ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಮೇಲೆ ದೈಹಿಕ ಹಲ್ಲೆಗಳಾದಾಗ ಮಾತನಾಡದ ಬಿಜೆಪಿಗರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥರ ಆಡಳಿತ ವೈಫಲ್ಯದ ವಿರುದ್ಧ ಧ್ವನಿ ಎತ್ತಿರುವುದಕ್ಕೆ ಅಪಸ್ವರ ಎತ್ತುವುದು ಯಾವ ನ್ಯಾಯ ಎಂದು ಕಿಡಿಕಾರಿದರು. ಜಿಲ್ಲೆಯ ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ದಲಿತರ ಮೇಲಾಗುವ ಅನ್ಯಾಯದ ವಿರುದ್ಧ ಮೊದಲು ಧ್ವನಿ ಎತ್ತಲಿ. ದೇಶದ ನಲವತ್ತು ಕೋಟಿ ದಲಿತರಿಗೆ ರಕ್ಷಣೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯ ದೇಶಾದ್ಯಂತ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ಅವುಗಳಲ್ಲಿ ಕೆಲವು ಪ್ರಕರಣ ಮಾತ್ರ ಬೆಳಕಿಗೆ ಬರುತ್ತಿದೆ ಎಂದು ವಿಷಾದಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಜನೀಶ್ ಕಾಪಿಕಾಡ್, ರೋಹಿತ್ ಉಳ್ಳಾಲ್, ಹೊನ್ನಯ್ಯ , ಪ್ರೇಮನಾಥ್ ಬಲ್ಲಾಳ್ಬಾಗ್ , ವಿಜಯಲಕ್ಷ್ಮಿ, ದಿನೇಶ್, ಪ್ರಭಾಕರ, ಚಂದ್ರಿಕಾ ಉಪಸ್ಥಿತರಿದ್ದರು.
What Power does BJP have to question about Youth Congress Leader Mithun Rai's Hindutva, slams youth congress members here in Mangalore at a press meet held at congress Bhavan office here on 13 Tuesday, October 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am