ಬ್ರೇಕಿಂಗ್ ನ್ಯೂಸ್
21-11-22 06:26 pm Mangalore Correspondent ಕರಾವಳಿ
ಮಂಗಳೂರು, ನ.21: ಕುಕ್ಕರ್ ಬಾಂಬ್ ಬ್ಲಾಸ್ಟ್ ಘಟನೆಯಿಂದಾಗಿ ಜನರು ಆತಂಕದಲ್ಲಿರುವಾಗಲೇ ಮಂಗಳೂರಿನಲ್ಲಿ ಮತ್ತೊಂದು ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿ ಪೊಲೀಸರನ್ನೇ ಆತಂಕಕ್ಕೀಡು ಮಾಡಿದ ಪ್ರಸಂಗ ನಡೆದಿದೆ.
ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನಾಥ ಬ್ಯಾಗ್ ಪತ್ತೆಯಾಗಿದ್ದು, ಅಲ್ಲಿದ್ದ ಜನರು ಮತ್ತು ನಿಲ್ದಾಣದ ಸಿಬಂದಿ ಅದನ್ನು ನೋಡುತ್ತಲೇ ಆತಂಕಗೊಂಡಿದ್ದಾರೆ. ವಾರೀಸುದಾರರಿಲ್ಲದೆ ಬ್ಯಾಗ್ ಬಸ್ ನಿಲ್ದಾಣದ ಒಳಗಿನ ಮೆಟ್ಟಿಲ ಬಳಿ ಅನಾಥವಾಗಿ ಬಿದ್ದುಕೊಂಡಿತ್ತು. ವಿಷಯ ತಿಳಿದ ಪೊಲೀಸರು ಅಲ್ಲಿದ್ದ ಜನರನ್ನು ದೂರಕ್ಕೆ ತೆರಳುವಂತೆ ಸೂಚಿಸಿದ್ದಾರೆ.


ಮೆಟ್ಟಿಲ ಹಾದಿಗೆ ಬ್ಯಾರಿಕೇಡ್ ಹಾಕಿ ಅಲ್ಲಿಂದ ಜನ ಸಂಚಾರವನ್ನು ಬಂದ್ ಮಾಡಿದ್ದಾರೆ. ಕೂಡಲೇ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನೂ ಸ್ಥಳಕ್ಕೆ ಕರೆಸಿದ್ದಾರೆ. ಶ್ವಾನದಳ ತಪಾಸಣೆ ನಡೆಸಿದಾಗ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಹೀಗಾಗಿ ಪೊಲೀಸರು ಬ್ಯಾಗನ್ನು ತೆಗೆದು ಪರಿಶೀಲನೆ ನಡೆಸಿದಾಗ, ಅದರಲ್ಲಿ ಒಂದಷ್ಟು ಹಳೆಯ ಬಟ್ಟೆಗಳು ಮತ್ತು ಕಾಗದ ಪತ್ರಗಳಷ್ಟೇ ಇದ್ದವು. ಅದನ್ನು ನೋಡಿದ ಪೊಲೀಸರು ತಾವು ಇಷ್ಟಕ್ಕೇ ಇಷ್ಟೊಂದು ಹೆದರಿಕೊಂಡಿದ್ದೇ ಅನ್ನುವಂತಾಯಿತು.

ಬಂದರು ಠಾಣೆ ಪೊಲೀಸರು ಮತ್ತು ಶ್ವಾನದಳ ಬಸ್ ನಿಲ್ದಾಣದ ಸುತ್ತಮುತ್ತ ತಪಾಸಣೆಯನ್ನೂ ನಡೆಸಿತು. ಬ್ಯಾಗಿನಲ್ಲಿ ಏನೂ ಇಲ್ಲ ಎಂಬುದನ್ನು ತಿಳಿಯುತ್ತಲೇ ಬಸ್ ನಿಲ್ದಾಣದ ಸಿಬಂದಿ ಮತ್ತು ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಎರಡು ದಿನಗಳ ಹಿಂದಷ್ಟೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದ್ದು ಅದರಿಂದಾಗಿ ಬಾಂಬ್ ಆತಂಕದ ವಾತಾವರಣ ನೆಲೆಸಿದ್ದರಿಂದ ಜನರು ಮತ್ತು ಪೊಲೀಸರು ಸಹಜವಾಗಿಯೇ ಬ್ಯಾಗ್ ಕಂಡು ಆತಂಕಗೊಂಡಿದ್ದರು. ಯಾರೋ ಪ್ರಯಾಣಿಕರು ಬ್ಯಾಗನ್ನು ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು ಅನ್ನುವ ಅನುಮಾನವಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Autorickshaw blast in Mangalore, Unidentified bag found in KSRTC bus stand create Panic. The bomb and canine squad of police rushed to the spot. After inspection, the owner of the bag was traced. The bag was that of a passenger.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm