ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm