ಬ್ರೇಕಿಂಗ್ ನ್ಯೂಸ್
22-11-22 02:03 pm Mangalore Correspondent ಕರಾವಳಿ
ಬೆಳ್ತಂಗಡಿ, ನ.22: ಕಾಡಿನಲ್ಲಿ ದೊರೆತ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.
ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ತೀರ ಬಡ ಕುಟುಂಬದ ಇವರ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಇಂದು ಬೆಳಗ್ಗೆ ಇವರಿಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.
ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಬಚಾವ್ ಆಗಿದ್ದಾರೆ. ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Two members of a family died after consuming poisonous mushrooms in Puduvettu, Belthangady Taluk on November 22. On Tuesday, locals found Guruva and his son lying dead in front of their house. It was later revealed that Guruva and his family had consumed poisonous mushrooms on Monday which is the cause of their death.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm