ಬ್ರೇಕಿಂಗ್ ನ್ಯೂಸ್
24-11-22 12:48 pm Mangalore Correspondent ಕರಾವಳಿ
ಮಂಗಳೂರು, ನ.24: ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ನಾವೇ ಮಾಡಿದ್ದಾಗಿ ಯಾವುದೋ ಅನಾಮಧೇಯ ಇಸ್ಲಾಮಿಕ್ ಸಂಘಟನೆಯೊಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೆಸರಲ್ಲಿ ಇನ್ ಸ್ಟಾ ಗ್ರಾಮಿನಲ್ಲಿ ಈ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಆ ಪೋಸ್ಟ್ ನಲ್ಲಿ ನಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು. ಆದರೆ ಬಾಂಬ್ ಅಲ್ಲಿಗೆ ತಲುಪುವ ಮೊದಲೇ ಬ್ಲಾಸ್ಟ್ ಆಗಿತ್ತು ಅಂತ ಉಲ್ಲೇಖ ಮಾಡಲಾಗಿದೆ. ಉರ್ದು ಭಾಷೆಯಲ್ಲಿ ಆರಂಭದಲ್ಲಿ ಬರೆಯಲಾಗಿದ್ದು, ಆನಂತರ ಇಂಗ್ಲಿಷ್ ನಲ್ಲಿ ಬರೆಯಲಾಗಿದೆ. ಇದಲ್ಲದೆ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಕುರಿತಾಗಿ ನಿಮ್ಮ ಸಂಭ್ರಮ ಕ್ಷಣಿಕವಾದದ್ದು. ತಕ್ಕ ಪರಿಣಾಮ ಸದ್ಯದಲ್ಲೇ ಎದುರಿಸಲಿದ್ದೀರಿ ಎಂದು ಎಚ್ಚರಿಕೆ ನೀಡಲಾಗಿದೆ.
ಮುಸ್ಲಿಮರ ಮೇಲಿನ ಗುಂಪು ಹತ್ಯೆ, ಕಿರುಕುಳಕ್ಕೆ ಪ್ರತಿಯಾಗಿ ಈ ಕೆಲಸ ಮಾಡುತ್ತಿದ್ದೇವೆ. ಜನರು ಸೇರುವ ಜಾಗದಲ್ಲೇ ಬಾಂಬ್ ಬ್ಲಾಸ್ಟ್ ಆಗಲಿದೆ. ಅದನ್ನು ಎದುರಿಸಲು ತಯಾರಾಗಿ ಎಂದು ಪರೋಕ್ಷವಾಗಿ ರಾಜ್ಯ ಪೊಲೀಸರಿಗೆ ಸವಾಲು ಹಾಕಲಾಗಿದೆ. ಈ ರೀತಿಯ ಹೇಳಿಕೆಯನ್ನು ಪ್ರತಿ ಘಟನೆಯ ಬಳಿಕವೂ ನಾವು ನೀಡುತ್ತೇವೆ ಎಂದು ಕೊನೆಯಲ್ಲಿ ಬರೆಯಲಾಗಿದೆ. ಆದರೆ ಈ ಹೇಳಿಕೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ಕೇಳಿದರೆ, ಅಂಥಹ ಸಂಘಟನೆಯ ಹೆಸರನ್ನೇ ಕೇಳಿಲ್ಲ. ಯಾರೋ ಪ್ರಚಾರಕ್ಕಾಗಿ ಹೀಗೆ ಮಾಡಿರಬಹುದು. ಏನಿದ್ದರೂ, ಈ ಬಗ್ಗೆ ವೆರಿಫೈ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಲಷ್ಕರ್ ಮತ್ತು ತಾಲಿಬಾನ್ ಸಂಘಟನೆಗಳ ನಂಟು ಹೊಂದಿದ್ದಾನೆಂದು ಹೇಳಲಾಗಿತ್ತು. ಆದರೆ ಅಂಥ ಜಾಗತಿಕ ಭಯೋತ್ಪಾದಕ ಸಂಘಟನೆಗಳು ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಯಾವುದೋ ಹೊಸ ಸಂಘಟನೆ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ನಕಲಿ ಐಡಿಯಲ್ಲಿ ಪೋಸ್ಟ್ ಮಾಡಿದ್ದು ಸದ್ಯಕ್ಕೆ ಕುತೂಹಲ ಉಂಟು ಮಾಡಿದೆ.
In a major development in the Mangaluru blast case, an unknown Islamist group has claimed responsibility for the explosion that injured two people, including the main accused and the driver. A press statement of an unknown group - Islamic Resistance Council - has surfaced claiming responsibility for the Mangalore autorickshaw blast. In the statement shared by IRC, the group said that their target was a temple in Kadri, which is a bastion of "saffron terrorism" in Mangaluru, but the bomb exploded before reaching the target.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm