ಬ್ರೇಕಿಂಗ್ ನ್ಯೂಸ್
24-11-22 04:14 pm Mangalore Correspondent ಕರಾವಳಿ
ಮಂಗಳೂರು, ನ.24: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಮಂಗಳೂರಿಗೆ ತಲುಪಿದ ಕೂಡಲೇ ಮಣ್ಣಗುಡ್ಡ ಸ್ಥಳದ ಬಗ್ಗೆ ಎರಡು ಬಾರಿ ಲೊಕೇಶನ್ ಟ್ರೇಸ್ ಮಾಡಿದ್ದಾನೆ. ತನಿಖಾ ತಂಡ ಆತನ ಮೊಬೈಲನ್ನು ಚೆಕ್ ಮಾಡಿದಾಗ ಮಹತ್ವದ ಮಾಹಿತಿಗಳು ಹೊರಬಂದಿದ್ದು, ಆತನ ಟಾರ್ಗೆಟ್ ಮಣ್ಣಗುಡ್ಡ ಆಗಿತ್ತೇ ಎನ್ನುವ ಸಂಶಯ ಮೂಡಿದೆ.
ಯಾಕಂದ್ರೆ, ನ.19ರಂದು ಮಣ್ಣಗುಡ್ಡದಲ್ಲಿ ಕನ್ನಡ ಹಬ್ಬ ಅನ್ನುವ ಶಾಲಾ ಮಕ್ಕಳ ಕಾರ್ಯಕ್ರಮ ಇತ್ತು. ಜೊತೆಗೆ, ಅದೇ ಪಕ್ಕದಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮವೂ ನಡೆದಿತ್ತು. ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜಿಲ್ಲೆಯ ವಿವಿಧೆಡೆಯಿಂದ ಮಕ್ಕಳು ಸೇರಿದ್ದರು. ಕನ್ನಡ ಶಾಲೆಗಳ ಮಕ್ಕಳನ್ನು ಒಟ್ಟು ಸೇರಿಸಿ ಆರೆಸ್ಸೆಸ್ ಅಧೀನದಲ್ಲಿರುವ ಮಣ್ಣಗುಡ್ಡದ ಸಂಘನಿಕೇತನದಲ್ಲಿ ಕಾರ್ಯಕ್ರಮ ಮಾಡಲಾಗಿತ್ತು. ಮಣ್ಣಗುಡ್ಡ ಪಕ್ಕದಲ್ಲೇ ಇರುವ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮ ಏರ್ಪಾಡಾಗಿತ್ತು. ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಹೆಸರಲ್ಲಿ 20 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲಾಗಿತ್ತು.

ಉಗ್ರ ಶಾರೀಕ್ ಮಂಗಳೂರಿಗೆ ಬರುವುದಕ್ಕೂ ಮುನ್ನ ವಿವಿಧ ಕಡೆಯ ಎಂಟತ್ತು ಬಾರಿ ಲೊಕೇಶನ್ ಹುಡುಕಾಟ ನಡೆಸಿದ್ದ. ಎಷ್ಟು ಹೊತ್ತಿಗೆ ಈ ಸ್ಥಳಗಳಿಗೆ ತಲುಪಬಹುದು ಅನ್ನುವ ಬಗ್ಗೆ ಲೆಕ್ಕ ಹಾಕಿದ್ದ. ಆದರೆ ಮೈಸೂರಿನಿಂದ ಮಡಿಕೇರಿ, ಪುತ್ತೂರು ಆಗಿ ಮಂಗಳೂರಿಗೆ ಬಸ್ ತಲುಪಿದಾಗಲೇ ಲೇಟ್ ಆಗಿದ್ದರಿಂದ ಪ್ಲಾನ್ ಕೈಕೊಟ್ಟಿತ್ತು ಎನ್ನಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನವೇ ತೆರಳಿದ್ದರು. ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿಯೂ ಸಂಜೆ ಹೊತ್ತಿಗೆ ಮಕ್ಕಳು ನಿರ್ಗಮಿಸಿದ್ದರು. ಆದರೆ ಆತನ ಗೂಗಲ್ ಸರ್ಚ್ ಹಿಸ್ಟರಿಯಲ್ಲಿ ಎರಡು ಬಾರಿ ಮಣ್ಣಗುಡ್ಡ- ಗಾಂಧಿನಗರ ಲೊಕೇಶನ್ ತೋರಿಸಿತ್ತು ಅನ್ನುವುದು ಶಾರೀಕ್ ಗುರಿ ಇದೇ ಜಾಗ ಆಗಿತ್ತಾ ಅನ್ನುವ ಶಂಕೆ ಮೂಡಿಸಿದೆ.
ಇವೆಲ್ಲ ಸಂದೇಹ, ಪ್ರಶ್ನೆಗಳಿಗೆ ಉತ್ತರವನ್ನು ಉಗ್ರ ಶಾರೀಕ್ ನೀಡಬೇಕಾಗಿದೆ. ಆದರೆ, ವೈದ್ಯರ ಮಾಹಿತಿ ಪ್ರಕಾರ ಸುಟ್ಟ ಗಾಯಗಳಿಂದ ಪಾರಾಗಬೇಕಿದ್ದರೆ ಕನಿಷ್ಠ 25 ದಿನಗಳು ಬೇಕಂತೆ. ಅಲ್ಲದೆ, ಬಾಂಬ್ ಸ್ಫೋಟ ಸಂದರ್ಭದಲ್ಲಿ ಬಿಸಿ ಹೊಗೆ ಬಾಯಿ ಒಳಗೆ ಹೋಗಿರುವುದರಿಂದ ಗಂಟಲು ಇನ್ಫೆಕ್ಷನ್ ಆಗಿದೆ. ಅದರಿಂದಾಗಿ ಸದ್ಯಕ್ಕೆ ಮಾತನಾಡುವ ಸ್ಥಿತಿಯಲ್ಲಿಲ್ಲ. ಒಂದು ತಿಂಗಳ ನಿರಂತರ ಚಿಕಿತ್ಸೆಯ ನಂತರವೇ ಆತ ಸ್ವಸ್ಥನಾದಲ್ಲಿ ಒಂದಷ್ಟು ಪ್ರಶ್ನೆಗಳಿಗೆ ಉತ್ತರ ನೀಡಬಹುದು ಅನ್ನುವ ಲೆಕ್ಕಾಚಾರ ಇದೆ. ಏನಿದ್ದರೂ ಮೆಡಿಕಲೀ ಫಿಟ್ ಎಂದು ವೈದ್ಯರು ಸರ್ಟಿಫಿಕೇಟ್ ನೀಡದ ಹೊರತು ತನಿಖಾಧಿಕಾರಿಗಳು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸದ್ಯಕ್ಕೆ ಶಾರೀಕ್ ಚಿಕಿತ್ಸೆಯನ್ನೇ ತನಿಖಾಧಿಕಾರಿಗಳು ಟಾರ್ಗೆಟ್ ಮಾಡಿದ್ದಾರೆ.
Autorickshaw bomb blast in Mangalore, Bomber Shariq location traced at Mangaladevi temple, did he plan for blast is the doubt police have got.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm