ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am