ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm