ಬ್ರೇಕಿಂಗ್ ನ್ಯೂಸ್
28-11-22 10:21 pm Mangalore Correspondent ಕರಾವಳಿ
ಮಂಗಳೂರು, ನ.28: ಸುರತ್ಕಲ್ ಟೋಲ್ ಗೇಟ್ ಕಡೆಗೂ ಅಲ್ಲಿಂದ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅದರಂತೆ, ಡಿ.1ರ ಬಳಿಕ ಸುರತ್ಕಲ್ ಟೋಲ್ ಅಲ್ಲಿ ಇರುವುದಿಲ್ಲ. ಬದಲಿಗೆ, ಹೆಜಮಾಡಿಯ ಟೋಲ್ ಗೇಟ್ ನಲ್ಲಿ ವಿಲೀನಗೊಳ್ಳಲಿದ್ದು ಅಲ್ಲಿನ ಶುಲ್ಕ ಡಬಲ್ ಗಿಂತಲೂ ಹೆಚ್ಚಾಗಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೋಟಿಫಿಕೇಶನ್ ಆಧರಿಸಿ ಜಿಲ್ಲಾಡಳಿತ ವಿಲೀನ ಮತ್ತು ಸುರತ್ಕಲ್ ಟೋಲ್ ಗೇಟ್ ತೆರವಿನ ಬಗ್ಗೆ ಆದೇಶ ಹೊರಡಿಸಿದೆ. ಅಲ್ಲದೆ, ಹೆದ್ದಾರಿ ಪ್ರಾಧಿಕಾರದ ನೋಟಿಫಿಕೇಶನ್ ರೀತಿಯಲ್ಲೇ ಹೆಜಮಾಡಿಯಲ್ಲಿ ಸುರತ್ಕಲ್ ಟೋಲನ್ನು ಪಡೆಯುವಂತೆ ನವಯುಗ ಸಂಸ್ಥೆಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವುದಕ್ಕೂ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನಾ ಧರಣಿ ನಡೆಯುತ್ತಿದೆ. ಕಳೆದ ಅ.28ರಂದು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ ಭಾರೀ ಪ್ರತಿಭಟನೆ ನಡೆದಿತ್ತು. ಪೊಲೀಸರ ಸರ್ಪಗಾವಲು ಮಧ್ಯೆಯೂ ಟೋಲ್ ಗೇಟನ್ನು ಬಲವಂತದಿಂದ ತೆರವು ಮಾಡಲು ಜನರು ಯತ್ನಿಸಿದ್ದರು. ಬಳಿಕ ಪೊಲೀಸರು ಸೇರಿದ್ದ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು ಬಂಧಿಸಿದ್ದರು. ಆನಂತರ, ಸ್ಥಳದಲ್ಲಿ ಪ್ರತಿಭಟನಾ ಧರಣಿ ನಡೆಸಲಾಗಿದ್ದು ಒಂದು ತಿಂಗಳನ್ನು ಪೂರೈಸಿದೆ. ಈ ನಡುವೆ ಶಾಸಕರು, ಸಂಸದರು ಸುರತ್ಕಲ್ ಟೋಲ್ ತೆರವುಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದರೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ವಿಲೀನಗೊಳಿಸಿ ಆದೇಶ ಹೊರಡಿಸಿದ್ದರು. ಇದರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳಿಗೆ ತೀವ್ರ ಮುಖಭಂಗ ಆಗಿತ್ತು.
ಇದೀಗ ಹೆದ್ದಾರಿ ಪ್ರಾಧಿಕಾರದ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಹೆಜಮಾಡಿಯಲ್ಲಿ ಟೋಲ್ ಡಬಲ್ ಸಂಗ್ರಹ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನಾ ಧರಣಿ ಅಲ್ಲಿಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ.
Mangalore DC orders for removal of the illegal Surathkal toll, double collection at Hejamady toll. But DC has not clarified anything about the double toll that will be collected at Hejamady hereafter.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am