ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.
ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm