ಬ್ರೇಕಿಂಗ್ ನ್ಯೂಸ್
29-11-22 10:57 pm Mangalore Correspondent ಕರಾವಳಿ
ಮಂಗಳೂರು, ನ.29 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿ ಹಂತಕ್ಕೆ ತಲುಪಿದೆ. ದ.ಕ. ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಕ್ಕೊಳಗಾಗಿ ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಫ್ಲೆಕ್ಸ್ ಗಳಲ್ಲ. ಅದು ಬಿಜೆಪಿ ಪಕ್ಷದ ಅತ್ಯಂತ ಕೆಟ್ಟ, ನಿರ್ಲಜ್ಜ, ಜನವಿರೋಧಿ ರಾಜಕಾರಣ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ನ.29ರಂದು 33ನೇ ದಿನದ ಹಗಲು ರಾತ್ರಿ ಧರಣಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧ ಹೋರಾಟ ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಈ ಹೋರಾಟದ ಜೊತೆಯಾಗಿ ನಿಂತ ದ.ಕ ಮತ್ತು ಉಡುಪಿ ಜಿಲ್ಲೆಯ ಜನಕ್ಕೂ ಹೋರಾಟದಿಂದ ಏನನ್ನೂ ಸಾಧಿಸಬಹುದೆಂಬ ಒಂದು ಹೊಸ ಭರವಸೆಯನ್ನು ತುಂಬಲು ಸಾಧ್ಯವಾಗಿದೆ. ತುಳುನಾಡಿನ ಮಣ್ಣಿನ ನಿಜವಾದ ಬೇಡಿಕೆ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಪ್ರಶ್ನೆಗಳು. ಶಿಕ್ಷಣ, ಆರೋಗ್ಯದಂತಹ ವ್ಯಾಪಾರೀಕರಣದ ವಿರುದ್ಧವೂ ಜಿಲ್ಲೆಯ ಜನ ಮುಂದಿನ ದಿನಗಳಲ್ಲಿ ಹೋರಾಟವನ್ನು ಕೈಗೊಳ್ಳಲು ಸಾಧ್ಯವಾಗಬೇಕು. ಈಗಾಗಲೇ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲು ಮುಂದಾಗಿರುವುದರ ವಿರುದ್ಧ ಆಕ್ರೋಶಗಳು ಆ ಭಾಗದಲ್ಲೂ ದಾಖಲಾಗುತ್ತಿದೆ. ಹೆಜಮಾಡಿಯಲ್ಲೂ ಕೋಮುವಾದಿ, ನಿರ್ಲಜ್ಜ, ಪರ್ಸಂಟೇಜ್ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ವಿವರಿಸಲಿದ್ದೇವೆ. ಡಿಸೆಂಬರ್ 2ರಂದು ಹೆಜಮಾಡಿ ಟೋಲ್ ಗೇಟ್ ಮುಂಭಾಗ ನಡೆಯುವ ಧರಣಿಯಲ್ಲಿ ನಾವು ಭಾಗವಹಿಸುವ ಮೂಲಕ ಅಲ್ಲಿನ ಹೋರಾಟಕ್ಕೆ ಸಹಮತವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.


ಮಾಜಿ ಶಾಸಕ ಮೊಯಿದ್ದಿನ್ ಬಾವಾ, ಸಿಐಟಿಯು ಕಾರ್ಮಿಕ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಬೀಡಿ ಕಾರ್ಮಿಕ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಪದ್ಮಾವತಿ ಶೆಟ್ಟಿ, ಬಾಬು ಪಿಲಾರ್, ಸದಾಶಿವ ದಾಸ್, ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ರಾವ್ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಮೇಯರ್ ಪುರುಷೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಬಶೀರ್ ಬೈಕಂಪಾಡಿ, ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮೂಸಬ್ಬ ಪಕ್ಷಿಕೆರೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ ಶೆಟ್ಟಿ, ಕಾಂಗ್ರೇಸ್ ಮುಖಂಡರಾದ ಸಾಹುಲ್ ಹಮೀದ್ , ಪಾರಡೈಸ್ ಯೂತ್ ಕ್ಲಬ್ ನ ಅಬೂಬಕ್ಕರ್, ಉಸ್ಮಾನ್, ಝಾಕಿರ್, ಡಿವೈಎಫ್ಐ ಮುಖಂಡರಾದ ಮಾಧುರಿ ಬೋಳಾರ, ಪ್ರಮೀಳಾ ಶಕ್ತಿನಗರ, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.
Surathkal toll protest, Muneer Katipalla Slams BJP says party has reached graveyard.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm