ಬ್ರೇಕಿಂಗ್ ನ್ಯೂಸ್
30-11-22 09:54 pm Mangalore Correspondent ಕರಾವಳಿ
ಮಂಗಳೂರು, ನ.30: ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ವಿದ್ಯಾಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಟ್ಟು ಅವುಗಳಿಗೆ ಅನುದಾನ ಒದಗಿಸಲು ಮುಂದಾಗುವ ಮೂಲಕ ಬಿ.ಜೆ.ಪಿ. ತನ್ನ ಅಸಲಿ ಮುಖವನ್ನು ಬಯಲು ಮಾಡಿಕೊಂಡಿದೆ ಎಂದು ಹಿಂದು ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಲೇವಡಿ ಮಾಡಿದ್ದಾರೆ.
ರಾಜ್ಯದ ಬಿಜೆಪಿ ಸರಕಾರ ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ವಿದ್ಯಾಸಂಸ್ಥೆ ತೆರೆಯಲು ಮುಂದಾಗಿರುವಾಗ ಹಿಂದೂಗಳಿಗೆಂದೇ ಯಾಕೆ ಪ್ರತ್ಯೇಕ ವಿದ್ಯಾಸಂಸ್ಥೆ ತೆರೆಯಬಾರದು ಎಂದು ಪವಿತ್ರನ್ ಪ್ರಶ್ನೆ ಮಾಡಿದ್ದಾರೆ. ಈ ದೇಶದಲ್ಲಿ ಹಿಂದುಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ. ಹಿಂದುಗಳ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಹಿಂದುಗಳ ಶಿಕ್ಷಣ ಸಂಸ್ಥೆ ತೆರೆಯುವ ಯಾವುದೇ ಗೋಜಿಗೆ ಹೋಗಿಲ್ಲ. ಹಿಂದೆ ಇದ್ದ ಗುರುಕುಲ ಪದ್ಧತಿ ಪ್ರಕಾರದ ಶಿಕ್ಷಣಕ್ಕೆ ಇವರು ಅನುಮತಿ ಕೊಡಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಅನುದಾನ ಕೊಡುತ್ತದೆ. ರಾಜ್ಯದಲ್ಲಿ ಪ್ರತಿ ಶಿಕ್ಷಣ ಸಂಸ್ಥೆಗೆ ತಲಾ ಎರಡೂವರೆ ಕೋಟಿ ಅಂದರೆ ಹತ್ತಯ ಸಂಸ್ಥೆಗಳಿಗೆ ಸುಮಾರು 30 ಕೋಟಿ ರೂ. ಅನುದಾನ ಕೊಡಲು ಮುಂದಾಗಿದೆ. ಇದನ್ನು ಖಂಡಿಸುತ್ತೇನೆ. ಬಿಜೆಪಿ ಚುನಾವಣೆ ಕಾಲದಲ್ಲಿ ಮುಸ್ಲಿಮರ ಓಲೈಕೆಗೆ ತೊಡಗಿರುವುದನ್ನು ತೋರಿಸಿದೆ ಎಂದಿದ್ದಾರೆ.

ಈ ರೀತಿ ಮಾಡಿದರೆ ಹಿಜಾಬ್ ವಿರುದ್ಧ ಮಾಡಿದ ಹೋರಾಟಕ್ಕೆ ಏನು ಬೆಲೆ ಬಂದಂತಾಯಿತು, ಇದು ಹಿಂದೂ ವಿರೋಧಿ ನೀತಿಯಲ್ಲವೇ, ಈ ಕೆಲಸವನ್ನು ಕಾಂಗ್ರೆಸ್ ಅಥವಾ ಬೇರೆ ಯಾವುದೇ ಪಕ್ಷದವರು ಮಾಡಿದ್ದರೆ ಬಿ.ಜೆ.ಪಿ. ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರಲಿಲ್ಲವೇ ಎಂದು ಸರಣಿ ಪ್ರಶ್ನೆಗಳನ್ನು ಪವಿತ್ರನ್ ಕೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷ ಪವಿತ್ರನ್, ಇಂತಹ ಬೇಜವಾಬ್ದಾರಿ ನಿಲುವನ್ನು ತೋರಿಸುತ್ತಿರುವ ಬಿಜೆಪಿ ಬೋಗಸ್ ಜನರ ಪಕ್ಷವಾಗಿದೆ ಎನ್ನುವುದನ್ನು ತೋರಿಸಿದೆ. ಹಿಂದೆ ಭ್ರಷ್ಟ ಜನರ ಪಕ್ಷವಾಗಿತ್ತು. ಈಗ ಬೋಗಸ್ ಜನರ ಪಕ್ಷವಾಗಿದೆ ಎಂದು ಜರೆದಿದ್ದಾರೆ.
The BHARATIYA Janata Party (BJP) has decided to open separate educational institutions for the Muslim community and provide them with grants. Hindu Mahasabha's Karnataka state president Rajesh Pavithran said the party has exposed its true face.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm