ಬ್ರೇಕಿಂಗ್ ನ್ಯೂಸ್
30-11-22 09:54 pm Mangalore Correspondent ಕರಾವಳಿ
ಮಂಗಳೂರು, ನ.30: ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ವಿದ್ಯಾಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಟ್ಟು ಅವುಗಳಿಗೆ ಅನುದಾನ ಒದಗಿಸಲು ಮುಂದಾಗುವ ಮೂಲಕ ಬಿ.ಜೆ.ಪಿ. ತನ್ನ ಅಸಲಿ ಮುಖವನ್ನು ಬಯಲು ಮಾಡಿಕೊಂಡಿದೆ ಎಂದು ಹಿಂದು ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಲೇವಡಿ ಮಾಡಿದ್ದಾರೆ.
ರಾಜ್ಯದ ಬಿಜೆಪಿ ಸರಕಾರ ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ವಿದ್ಯಾಸಂಸ್ಥೆ ತೆರೆಯಲು ಮುಂದಾಗಿರುವಾಗ ಹಿಂದೂಗಳಿಗೆಂದೇ ಯಾಕೆ ಪ್ರತ್ಯೇಕ ವಿದ್ಯಾಸಂಸ್ಥೆ ತೆರೆಯಬಾರದು ಎಂದು ಪವಿತ್ರನ್ ಪ್ರಶ್ನೆ ಮಾಡಿದ್ದಾರೆ. ಈ ದೇಶದಲ್ಲಿ ಹಿಂದುಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ. ಹಿಂದುಗಳ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಹಿಂದುಗಳ ಶಿಕ್ಷಣ ಸಂಸ್ಥೆ ತೆರೆಯುವ ಯಾವುದೇ ಗೋಜಿಗೆ ಹೋಗಿಲ್ಲ. ಹಿಂದೆ ಇದ್ದ ಗುರುಕುಲ ಪದ್ಧತಿ ಪ್ರಕಾರದ ಶಿಕ್ಷಣಕ್ಕೆ ಇವರು ಅನುಮತಿ ಕೊಡಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಅನುದಾನ ಕೊಡುತ್ತದೆ. ರಾಜ್ಯದಲ್ಲಿ ಪ್ರತಿ ಶಿಕ್ಷಣ ಸಂಸ್ಥೆಗೆ ತಲಾ ಎರಡೂವರೆ ಕೋಟಿ ಅಂದರೆ ಹತ್ತಯ ಸಂಸ್ಥೆಗಳಿಗೆ ಸುಮಾರು 30 ಕೋಟಿ ರೂ. ಅನುದಾನ ಕೊಡಲು ಮುಂದಾಗಿದೆ. ಇದನ್ನು ಖಂಡಿಸುತ್ತೇನೆ. ಬಿಜೆಪಿ ಚುನಾವಣೆ ಕಾಲದಲ್ಲಿ ಮುಸ್ಲಿಮರ ಓಲೈಕೆಗೆ ತೊಡಗಿರುವುದನ್ನು ತೋರಿಸಿದೆ ಎಂದಿದ್ದಾರೆ.
ಈ ರೀತಿ ಮಾಡಿದರೆ ಹಿಜಾಬ್ ವಿರುದ್ಧ ಮಾಡಿದ ಹೋರಾಟಕ್ಕೆ ಏನು ಬೆಲೆ ಬಂದಂತಾಯಿತು, ಇದು ಹಿಂದೂ ವಿರೋಧಿ ನೀತಿಯಲ್ಲವೇ, ಈ ಕೆಲಸವನ್ನು ಕಾಂಗ್ರೆಸ್ ಅಥವಾ ಬೇರೆ ಯಾವುದೇ ಪಕ್ಷದವರು ಮಾಡಿದ್ದರೆ ಬಿ.ಜೆ.ಪಿ. ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರಲಿಲ್ಲವೇ ಎಂದು ಸರಣಿ ಪ್ರಶ್ನೆಗಳನ್ನು ಪವಿತ್ರನ್ ಕೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷ ಪವಿತ್ರನ್, ಇಂತಹ ಬೇಜವಾಬ್ದಾರಿ ನಿಲುವನ್ನು ತೋರಿಸುತ್ತಿರುವ ಬಿಜೆಪಿ ಬೋಗಸ್ ಜನರ ಪಕ್ಷವಾಗಿದೆ ಎನ್ನುವುದನ್ನು ತೋರಿಸಿದೆ. ಹಿಂದೆ ಭ್ರಷ್ಟ ಜನರ ಪಕ್ಷವಾಗಿತ್ತು. ಈಗ ಬೋಗಸ್ ಜನರ ಪಕ್ಷವಾಗಿದೆ ಎಂದು ಜರೆದಿದ್ದಾರೆ.
The BHARATIYA Janata Party (BJP) has decided to open separate educational institutions for the Muslim community and provide them with grants. Hindu Mahasabha's Karnataka state president Rajesh Pavithran said the party has exposed its true face.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm