ಬ್ರೇಕಿಂಗ್ ನ್ಯೂಸ್
01-12-22 04:58 pm Mangalore Correspondent ಕರಾವಳಿ
ಮಂಗಳೂರು, ಡಿ.1: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಸುಟ್ಟ ಗಾಯಗಳಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದ್ದು, ವೈದ್ಯರ ಸೂಚನೆಯಂತೆ ಪೊಲೀಸರು ಆತನನ್ನು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಒಂದಷ್ಟು ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ಪಡೆದುಕೊಂಡಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ಶಾರೀಕ್ ಸಕಾರಾತ್ಮಕವಾಗಿಯೇ ಉತ್ತರ ನೀಡಿದ್ದಾನೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದು, ಸುಟ್ಟ ಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಒಂದಷ್ಟು ಚೇತರಿಕೆ ಕಂಡಿರುವುದರಿಂದ ಆರೋಪಿಯನ್ನು ವಿಚಾರಣೆ ನಡೆಸಲು ವೈದ್ಯರು ಅನುಮತಿ ನೀಡಿದ್ದಾರೆ. ಹಾಗಾಗಿ ಕೆಲವೊಂದಷ್ಟು ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ. ಸದ್ಯಕ್ಕೆ ಡಿಜಿಪಿ ಸೂಚನೆಯಂತೆ, ದೇಶದ್ರೋಹ ಕಾಯ್ದೆಯಡಿ ದಾಖಲಾಗಿರುವುದರಿಂದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿದೆ. ಮುಂದಿನ ತನಿಖೆಯನ್ನು ಎನ್ಐಎ ಏಜನ್ಸಿಯವರೇ ಮಾಡಲಿದ್ದಾರೆ. ಅವರಿಗೆ ಬೇಕಾದ ಪೊಲೀಸ್ ಸಿಬಂದಿ ನೆರವನ್ನು ನಾವು ನೀಡುತ್ತೇವೆ ಎಂದು ಹೇಳಿದ್ದಾರೆ.

ಈ ನಡುವೆ, ಎನ್ಐಎ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ, ಪ್ರಕರಣದ ಬೆಳವಣಿಗೆ ಕುರಿತು ತನಿಖಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ, ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಸುಟ್ಟ ಗಾಯಗಳಿಂದ ಚೇತರಿಕೆ ಕಂಡಿದ್ದು, ಐಸಿಯು ಘಟಕದಿಂದ ಬೇರೆ ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಸುಟ್ಟ ಗಾಯ ಆಗಿರುವುದರಿಂದ ಪ್ರತ್ಯೇಕವಾಗಿರಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.


ಶಾರೀಕ್ ಗೆ ಇನ್ನೆಷ್ಟು ದಿನ ಚಿಕಿತ್ಸೆ ಬೇಕಾಗಬಹುದು ಎಂಬ ಪ್ರಶ್ನೆಗೆ, ಅದು ಹೇಳಕ್ಕೆ ಬರೋದಿಲ್ಲ, ವೈದ್ಯರು ಹೇಳಬೇಕಷ್ಟೆ. 40 ಶೇ. ದೇಹದ ಭಾಗಗಳು ಸುಟ್ಟು ಹೋಗಿರುವುದರಿಂದ ಒಳಭಾಗದಲ್ಲಿ ಕಂಡಿಶನ್ ಹೇಳಕ್ಕಾಗಲ್ಲ. ಸದ್ಯಕ್ಕೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದರು. ನ.19ರಂದು ಮಂಗಳೂರಿನ ನಾಗುರಿಯಲ್ಲಿ ಆಟೋದಲ್ಲಿ ಚಲಿಸುತ್ತಿದ್ದಾಗಲೇ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಆಟೋ ಚಾಲಕ ಮತ್ತು ಅದರಲ್ಲಿದ್ದ ಪ್ರಯಾಣಿಕ ಗಾಯಗೊಂಡಿದ್ದ. ಬಳಿಕ ನಡೆದ ತನಿಖೆಯಲ್ಲಿ ಪ್ರಯಾಣಿಕನಾಗಿ ಇದ್ದಿದ್ದು ಮೊಹಮ್ಮದ್ ಶಾರೀಕ್ ಅನ್ನುವುದು ತಿಳಿದುಬಂದಿತ್ತು.
Mangalore bomb blast accused sharik health improved investigation begun.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm