ಬ್ರೇಕಿಂಗ್ ನ್ಯೂಸ್
01-12-22 09:05 pm Mangalore Correspondent ಕರಾವಳಿ
ಮಂಗಳೂರು, ಡಿ.1: ನಗರದ ಪಂಪ್ವೆಲ್ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಕೀಯ ಶಿವಾಜಿ ಪ್ರತಿಮೆ ಯಾಕೆ ಬೇಕು, ನಮ್ಮಲ್ಲಿ ಸಾಧನೆ ಮಾಡಿರುವ ಮಂದಿ ಅನೇಕರಿದ್ದಾರೆ. ಅಂಥವರ ಪ್ರತಿಮೆ ಸ್ಥಾಪನೆ ಮಾಡಬಹುದಲ್ಲವೇ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ ನೀಡಿದ್ದ ಶಿವಾಜಿ ಪ್ರತಿಮೆಯ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಯನ್ನು ಕಳೆದ ಬಾರಿ ಅ.29ರಂದು ನಡೆದಿದ್ದ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.


ಈ ಬಾರಿಯ ಕೌನ್ಸಿಲ್ ಸಭೆಯಲ್ಲಿ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ ವಿಷಯ ಪ್ರಸ್ತಾಪಿಸಿ, ಪಂಪ್ವೆಲ್ನಲ್ಲಿ ಭಗವಾನ್ ಮಹಾವೀರರ ಕಲಶವಿದೆ. ಮಹಾವೀರ ವೃತ್ತ ಎಂದು ಹೆಸರು ಇದೆ. ಇನ್ನೊಂದೆಡೆ ಅಲ್ಲಿ ಮಹಾರಾಷ್ಟ್ರದವರು ನಮ್ಮ ಬಸ್ಗಳಿಗೆ ಮಸಿ ಬಳಿಯುತ್ತಿದ್ದಾರೆ. ಎಂಇಎಸ್ ಕನ್ನಡಿಗರಿಗೆ ವಿರೋಧ ನಿಲುವು ಹೊಂದಿದೆ. ಹಾಗಿರುವಾಗ ಮರಾಠ ರಾಜ ಶಿವಾಜಿ ಪ್ರತಿಮೆ ಇಲ್ಲಿ ಯಾಕೆ ಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಕಾರ್ಪೊರೇಟರುಗಳು, ನೀವು ಹಿಂದು ನಾಯಕರನ್ನು ಯಾವಾಗಲೂ ಆಕ್ಷೇಪಿಸುತ್ತೀರಿ. ಹಿಂದೂಗಳನ್ನು ಒಗ್ಗೂಡಿಸಿದ ಶಿವಾಜಿ ಪ್ರತಿಮೆ ಹಾಕಿದರೆ ತಪ್ಪೇನು? ಅವರನ್ನು ಮಹಾರಾಷ್ಟ್ರಕ್ಕೆ ಸೀಮಿತ ಮಾಡಬೇಡಿ ಎಂದು ಹೇಳಿದರು.
ಕಾಂಗ್ರೆಸ್ ಸದಸ್ಯ ನವೀನ್ ಡಿಸೋಜ ಜತೆ ಶಶಿಧರ ಹೆಗ್ಡೆ ದನಿಗೂಡಿಸಿ, ನಾವು ಹಿಂದು ವಿರೋಧಿಗಳಲ್ಲ. ಭಾವನಾತ್ಮಕ ವಿಷಯ ಬಿಟ್ಟು, ರಚನಾತ್ಮಕ ಅಭಿವೃದ್ಧಿ ಕೆಲಸಗಳನ್ನು ಮಾಡಿ. ನಗರಕ್ಕೆ ಶಿವಾಜಿ ಕೊಡುಗೆ ಏನು? ನಮ್ಮವರೇ ಆಗಿರುವ ಕಯ್ಯಾರ, ಕಾರ್ನಾಡ್, ಕೆ.ಎಸ್.ಹೆಗ್ಡೆ ಮತ್ತಿತರರ ಪ್ರತಿಮೆ ಮಾಡಬಹುದಲ್ಲ? ಸಾಧ್ಯವಾದರೆ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಪುತ್ಥಳಿ ನಿರ್ಮಿಸಿ ಎಂದು ಸವಾಲು ಹಾಕಿದರು. ನವೀನ್ ಡಿಸೋಜ ಕೂಡ ಕೋಟಿ ಚೆನ್ನಯ ಪ್ರತಿಮೆ ಸ್ಥಾಪನೆಗೆ ಒತ್ತಾಯ ಮಂಡಿಸಿದರು.

ಇದರಿಂದ ಬಿಜೆಪಿ ಆಡಳಿತಕ್ಕೆ ಪ್ರತ್ಯುತ್ತರ ನೀಡಲು ಸಾಧ್ಯವಾಗಲಿಲ್ಲ. ನಾಡಿನ ಸಾಧಕರ ಪ್ರತಿಮೆ ಸ್ಥಾಪಿಸುವಂತೆ ಕಾಂಗ್ರೆಸ್ ನೀಡಿದ ಸವಾಲನ್ನು ಸ್ವೀಕರಿಸಿದ ಬಿಜೆಪಿ ಸದಸ್ಯರು, ನಿಮ್ಮ ಆಕ್ಷೇಪವನ್ನು ದಾಖಲಿಸುತ್ತೇವೆ. ಶಿವಾಜಿ ಪ್ರತಿಮೆ ವಿಚಾರ ಕಳೆದ ಬಾರಿಯೇ ಅನುಮೋದನೆ ಆಗಿತ್ತು. ಆಗ ನೀವು ವಿರೋಧ ಮಾಡಿರಲಿಲ್ಲ ಎಂದು ಹೇಳಿದರು.
New controversy shivaji statue in Mangalore congress opposed in MCC meeting.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm