ಬ್ರೇಕಿಂಗ್ ನ್ಯೂಸ್
01-12-22 09:05 pm Mangalore Correspondent ಕರಾವಳಿ
ಮಂಗಳೂರು, ಡಿ.1: ನಗರದ ಪಂಪ್ವೆಲ್ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಕೀಯ ಶಿವಾಜಿ ಪ್ರತಿಮೆ ಯಾಕೆ ಬೇಕು, ನಮ್ಮಲ್ಲಿ ಸಾಧನೆ ಮಾಡಿರುವ ಮಂದಿ ಅನೇಕರಿದ್ದಾರೆ. ಅಂಥವರ ಪ್ರತಿಮೆ ಸ್ಥಾಪನೆ ಮಾಡಬಹುದಲ್ಲವೇ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ ನೀಡಿದ್ದ ಶಿವಾಜಿ ಪ್ರತಿಮೆಯ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಯನ್ನು ಕಳೆದ ಬಾರಿ ಅ.29ರಂದು ನಡೆದಿದ್ದ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.


ಈ ಬಾರಿಯ ಕೌನ್ಸಿಲ್ ಸಭೆಯಲ್ಲಿ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ ವಿಷಯ ಪ್ರಸ್ತಾಪಿಸಿ, ಪಂಪ್ವೆಲ್ನಲ್ಲಿ ಭಗವಾನ್ ಮಹಾವೀರರ ಕಲಶವಿದೆ. ಮಹಾವೀರ ವೃತ್ತ ಎಂದು ಹೆಸರು ಇದೆ. ಇನ್ನೊಂದೆಡೆ ಅಲ್ಲಿ ಮಹಾರಾಷ್ಟ್ರದವರು ನಮ್ಮ ಬಸ್ಗಳಿಗೆ ಮಸಿ ಬಳಿಯುತ್ತಿದ್ದಾರೆ. ಎಂಇಎಸ್ ಕನ್ನಡಿಗರಿಗೆ ವಿರೋಧ ನಿಲುವು ಹೊಂದಿದೆ. ಹಾಗಿರುವಾಗ ಮರಾಠ ರಾಜ ಶಿವಾಜಿ ಪ್ರತಿಮೆ ಇಲ್ಲಿ ಯಾಕೆ ಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಕಾರ್ಪೊರೇಟರುಗಳು, ನೀವು ಹಿಂದು ನಾಯಕರನ್ನು ಯಾವಾಗಲೂ ಆಕ್ಷೇಪಿಸುತ್ತೀರಿ. ಹಿಂದೂಗಳನ್ನು ಒಗ್ಗೂಡಿಸಿದ ಶಿವಾಜಿ ಪ್ರತಿಮೆ ಹಾಕಿದರೆ ತಪ್ಪೇನು? ಅವರನ್ನು ಮಹಾರಾಷ್ಟ್ರಕ್ಕೆ ಸೀಮಿತ ಮಾಡಬೇಡಿ ಎಂದು ಹೇಳಿದರು.
ಕಾಂಗ್ರೆಸ್ ಸದಸ್ಯ ನವೀನ್ ಡಿಸೋಜ ಜತೆ ಶಶಿಧರ ಹೆಗ್ಡೆ ದನಿಗೂಡಿಸಿ, ನಾವು ಹಿಂದು ವಿರೋಧಿಗಳಲ್ಲ. ಭಾವನಾತ್ಮಕ ವಿಷಯ ಬಿಟ್ಟು, ರಚನಾತ್ಮಕ ಅಭಿವೃದ್ಧಿ ಕೆಲಸಗಳನ್ನು ಮಾಡಿ. ನಗರಕ್ಕೆ ಶಿವಾಜಿ ಕೊಡುಗೆ ಏನು? ನಮ್ಮವರೇ ಆಗಿರುವ ಕಯ್ಯಾರ, ಕಾರ್ನಾಡ್, ಕೆ.ಎಸ್.ಹೆಗ್ಡೆ ಮತ್ತಿತರರ ಪ್ರತಿಮೆ ಮಾಡಬಹುದಲ್ಲ? ಸಾಧ್ಯವಾದರೆ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಪುತ್ಥಳಿ ನಿರ್ಮಿಸಿ ಎಂದು ಸವಾಲು ಹಾಕಿದರು. ನವೀನ್ ಡಿಸೋಜ ಕೂಡ ಕೋಟಿ ಚೆನ್ನಯ ಪ್ರತಿಮೆ ಸ್ಥಾಪನೆಗೆ ಒತ್ತಾಯ ಮಂಡಿಸಿದರು.

ಇದರಿಂದ ಬಿಜೆಪಿ ಆಡಳಿತಕ್ಕೆ ಪ್ರತ್ಯುತ್ತರ ನೀಡಲು ಸಾಧ್ಯವಾಗಲಿಲ್ಲ. ನಾಡಿನ ಸಾಧಕರ ಪ್ರತಿಮೆ ಸ್ಥಾಪಿಸುವಂತೆ ಕಾಂಗ್ರೆಸ್ ನೀಡಿದ ಸವಾಲನ್ನು ಸ್ವೀಕರಿಸಿದ ಬಿಜೆಪಿ ಸದಸ್ಯರು, ನಿಮ್ಮ ಆಕ್ಷೇಪವನ್ನು ದಾಖಲಿಸುತ್ತೇವೆ. ಶಿವಾಜಿ ಪ್ರತಿಮೆ ವಿಚಾರ ಕಳೆದ ಬಾರಿಯೇ ಅನುಮೋದನೆ ಆಗಿತ್ತು. ಆಗ ನೀವು ವಿರೋಧ ಮಾಡಿರಲಿಲ್ಲ ಎಂದು ಹೇಳಿದರು.
New controversy shivaji statue in Mangalore congress opposed in MCC meeting.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm