ಬ್ರೇಕಿಂಗ್ ನ್ಯೂಸ್
01-12-22 09:05 pm Mangalore Correspondent ಕರಾವಳಿ
ಮಂಗಳೂರು, ಡಿ.1: ನಗರದ ಪಂಪ್ವೆಲ್ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಕೀಯ ಶಿವಾಜಿ ಪ್ರತಿಮೆ ಯಾಕೆ ಬೇಕು, ನಮ್ಮಲ್ಲಿ ಸಾಧನೆ ಮಾಡಿರುವ ಮಂದಿ ಅನೇಕರಿದ್ದಾರೆ. ಅಂಥವರ ಪ್ರತಿಮೆ ಸ್ಥಾಪನೆ ಮಾಡಬಹುದಲ್ಲವೇ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ ನೀಡಿದ್ದ ಶಿವಾಜಿ ಪ್ರತಿಮೆಯ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಯನ್ನು ಕಳೆದ ಬಾರಿ ಅ.29ರಂದು ನಡೆದಿದ್ದ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.


ಈ ಬಾರಿಯ ಕೌನ್ಸಿಲ್ ಸಭೆಯಲ್ಲಿ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ ವಿಷಯ ಪ್ರಸ್ತಾಪಿಸಿ, ಪಂಪ್ವೆಲ್ನಲ್ಲಿ ಭಗವಾನ್ ಮಹಾವೀರರ ಕಲಶವಿದೆ. ಮಹಾವೀರ ವೃತ್ತ ಎಂದು ಹೆಸರು ಇದೆ. ಇನ್ನೊಂದೆಡೆ ಅಲ್ಲಿ ಮಹಾರಾಷ್ಟ್ರದವರು ನಮ್ಮ ಬಸ್ಗಳಿಗೆ ಮಸಿ ಬಳಿಯುತ್ತಿದ್ದಾರೆ. ಎಂಇಎಸ್ ಕನ್ನಡಿಗರಿಗೆ ವಿರೋಧ ನಿಲುವು ಹೊಂದಿದೆ. ಹಾಗಿರುವಾಗ ಮರಾಠ ರಾಜ ಶಿವಾಜಿ ಪ್ರತಿಮೆ ಇಲ್ಲಿ ಯಾಕೆ ಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಕಾರ್ಪೊರೇಟರುಗಳು, ನೀವು ಹಿಂದು ನಾಯಕರನ್ನು ಯಾವಾಗಲೂ ಆಕ್ಷೇಪಿಸುತ್ತೀರಿ. ಹಿಂದೂಗಳನ್ನು ಒಗ್ಗೂಡಿಸಿದ ಶಿವಾಜಿ ಪ್ರತಿಮೆ ಹಾಕಿದರೆ ತಪ್ಪೇನು? ಅವರನ್ನು ಮಹಾರಾಷ್ಟ್ರಕ್ಕೆ ಸೀಮಿತ ಮಾಡಬೇಡಿ ಎಂದು ಹೇಳಿದರು.
ಕಾಂಗ್ರೆಸ್ ಸದಸ್ಯ ನವೀನ್ ಡಿಸೋಜ ಜತೆ ಶಶಿಧರ ಹೆಗ್ಡೆ ದನಿಗೂಡಿಸಿ, ನಾವು ಹಿಂದು ವಿರೋಧಿಗಳಲ್ಲ. ಭಾವನಾತ್ಮಕ ವಿಷಯ ಬಿಟ್ಟು, ರಚನಾತ್ಮಕ ಅಭಿವೃದ್ಧಿ ಕೆಲಸಗಳನ್ನು ಮಾಡಿ. ನಗರಕ್ಕೆ ಶಿವಾಜಿ ಕೊಡುಗೆ ಏನು? ನಮ್ಮವರೇ ಆಗಿರುವ ಕಯ್ಯಾರ, ಕಾರ್ನಾಡ್, ಕೆ.ಎಸ್.ಹೆಗ್ಡೆ ಮತ್ತಿತರರ ಪ್ರತಿಮೆ ಮಾಡಬಹುದಲ್ಲ? ಸಾಧ್ಯವಾದರೆ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಪುತ್ಥಳಿ ನಿರ್ಮಿಸಿ ಎಂದು ಸವಾಲು ಹಾಕಿದರು. ನವೀನ್ ಡಿಸೋಜ ಕೂಡ ಕೋಟಿ ಚೆನ್ನಯ ಪ್ರತಿಮೆ ಸ್ಥಾಪನೆಗೆ ಒತ್ತಾಯ ಮಂಡಿಸಿದರು.

ಇದರಿಂದ ಬಿಜೆಪಿ ಆಡಳಿತಕ್ಕೆ ಪ್ರತ್ಯುತ್ತರ ನೀಡಲು ಸಾಧ್ಯವಾಗಲಿಲ್ಲ. ನಾಡಿನ ಸಾಧಕರ ಪ್ರತಿಮೆ ಸ್ಥಾಪಿಸುವಂತೆ ಕಾಂಗ್ರೆಸ್ ನೀಡಿದ ಸವಾಲನ್ನು ಸ್ವೀಕರಿಸಿದ ಬಿಜೆಪಿ ಸದಸ್ಯರು, ನಿಮ್ಮ ಆಕ್ಷೇಪವನ್ನು ದಾಖಲಿಸುತ್ತೇವೆ. ಶಿವಾಜಿ ಪ್ರತಿಮೆ ವಿಚಾರ ಕಳೆದ ಬಾರಿಯೇ ಅನುಮೋದನೆ ಆಗಿತ್ತು. ಆಗ ನೀವು ವಿರೋಧ ಮಾಡಿರಲಿಲ್ಲ ಎಂದು ಹೇಳಿದರು.
New controversy shivaji statue in Mangalore congress opposed in MCC meeting.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm