ಬ್ರೇಕಿಂಗ್ ನ್ಯೂಸ್
02-12-22 09:26 pm Mangalore Correspondent ಕರಾವಳಿ
ಮಂಗಳೂರು, ಡಿ.2: ಸುರತ್ಕಲ್ ಟೋಲ್ ಗೇಟ್ ಅಕ್ರಮವೆಂದು ಕಳೆದ ಐದಾರು ವರ್ಷಗಳಿಂದ ಜನರು ಪ್ರತಿಭಟನೆ ನಡೆಸುತ್ತಲೇ ಬಂದಿದ್ದರು. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಈ ಭಾಗದ ಶಾಸಕರು, ಸಂಸದರು ಮಾತ್ರ ಒಪ್ಪಿಕೊಂಡಿರಲಿಲ್ಲ. ಇದೀಗ ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬರೆದ ಪತ್ರದಲ್ಲಿ ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿ ಕಾರ್ಯಾಚರಿಸುತ್ತಿತ್ತು ಎನ್ನುವುದನ್ನು ಉಲ್ಲೇಖ ಮಾಡಿದ್ದಾರೆ. ಶಾಸಕ ಭಟ್, ಸಚಿವರಿಗೆ ಬರೆದ ಪತ್ರದ ಸಾರಾಂಶ ಇಂತಿದೆ.
ಕಳೆದ ಏಳು ವರ್ಷಗಳಿಂದ ಸುರತ್ಕಲ್ ಟೋಲ್ ಗೇಟ್ ಅಕ್ರವಾಗಿಯೇ ನಡೆದುಕೊಂಡು ಬಂದಿತ್ತು. ಹೆದ್ದಾರಿ ಪ್ರಾಧಿಕಾರದವರು ಹೆಜಮಾಡಿ ಟೋಲ್ ಗೇಟ್ ಆರಂಭಿಸಿದ ಬಳಿಕ ಇಲ್ಲಿನ ಸುರತ್ಕಲ್ ಟೋಲ್ ಗೇಟ್ ತೆರವು ಮಾಡುವುದಾಗಿ ಹೇಳಿದ್ದರು. ಆದರೆ ಮೂರು ವರ್ಷಗಳ ಹಿಂದೆ ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡಿದ್ದರೂ, ಸುರತ್ಕಲ್ ಟೋಲ್ ಗೇಟ್ ತೆರವು ಮಾಡಿರಲಿಲ್ಲ.

ಸಾರ್ವಜನಿಕರ ವಿರೋಧದ ನಡುವೆಯೂ ಕಳೆದ ಆರು ವರ್ಷಗಳಿಂದ ಸುರತ್ಕಲ್ ಟೋಲ್ ಗೇಟ್ ಮತ್ತು ಹೆಜಮಾಡಿಯಲ್ಲಿ ಅಕ್ರಮವಾಗಿ ಹತ್ತು ಕಿಮೀ ಅಂತರದಲ್ಲಿ ಎರಡೆರಡು ಕಡೆ ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ಆರು ವರ್ಷಗಳಿಂದ ಜನರು ಪ್ರತಿಭಟನೆ, ಧರಣಿ ನಡೆಸಿದರೂ, ಈ ಬಗ್ಗೆ ಹೆದ್ದಾರಿ ಅಧಿಕಾರಿಗಳು ಕ್ಯಾರ್ ಮಾಡಿರಲಿಲ್ಲ. ಈ ನಡುವೆ, ಕಳೆದ ಸಂಸತ್ತಿನ ಅಧಿವೇಶನದಲ್ಲಿ ತಾವು 60 ಕಿಮೀ ಒಳಗಿನ ಟೋಲ್ ಗೇಟ್ ಮುಚ್ಚುತ್ತೇವೆ ಎಂದು ಹೇಳಿಕೆ ನೀಡಿದ್ದರೂ, ಅದು ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಕಾರ್ಯರೂಪಕ್ಕೆ ಬಂದಿಲ್ಲ ಅನ್ನುವುದು ಖೇದಕರ.

ಈಗ ಸಾರ್ವಜನಿಕರ ಕಡೆಯಿಂದ ವ್ಯಾಪಕ ಪ್ರತಿರೋಧ ಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸುರತ್ಕಲ್ ಟೋಲ್ ಗೇಟನ್ನು ರದ್ದುಗೊಳಿಸಿ, ಅಲ್ಲಿನ ಶುಲ್ಕವನ್ನು ಹತ್ತು ಕಿಮೀ ದೂರದ ಹೆಜಮಾಡಿಯಲ್ಲಿ ವಸೂಲಿ ಮಾಡಲಾಗುವುದೆಂದು ಆದೇಶ ಮಾಡಿದೆ. ಈ ರೀತಿಯ ಆದೇಶದಿಂದ ಉಡುಪಿ ಜಿಲ್ಲೆಯ ಟ್ಯಾಕ್ಸಿ ಮತ್ತಿತರ ವಾಹನ ಪ್ರಯಾಣಿಕರು ತೀವ್ರ ತೊಂದರೆಗೆ ಈಡಾಗುತ್ತಾರೆ. ಸುರತ್ಕಲ್ ಟೋಲ್ ಗೇಟ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದರೆ, ಹೆಜಮಾಡಿ ಟೋಲ್ ಗೇಟ್ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿದೆ. ಎರಡೂ ಪ್ರತ್ಯೇಕ ರಸ್ತೆಗಳಾಗಿದ್ದು, ಬೇರೆಯದ್ದೇ ಕಂಪನಿಗಳು ಕಾಮಗಾರಿ ಕೈಗೊಂಡಿದ್ದವು.

ಹೀಗಿದ್ದರೂ, ಕೇವಲ 90 ಕಿಮೀ ಅಂತರ ಇರುವ ಒಂದೇ ಹೆದ್ದಾರಿಯಲ್ಲಿ ಸಾಸ್ತಾನ, ಹೆಜಮಾಡಿ, ಸುರತ್ಕಲ್ ಮತ್ತು ತಲಪಾಡಿಯಲ್ಲಿ ನಾಲ್ಕು ಕಡೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಈಗ ಸುರತ್ಕಲ್ ಟೋಲ್ ಗೇಟನ್ನು ಜನರ ಒತ್ತಾಯಕ್ಕೆ ಮಣಿದು ರದ್ದು ಮಾಡಲು ನಿರ್ಣಯಕ್ಕೆ ಬರಲಾಗಿದೆ. ಆದರೆ ಅಲ್ಲಿನ ಶುಲ್ಕವನ್ನು ಹೆಜಮಾಡಿಗೆ ವಿಲೀನಗೊಳಿಸಿ, ದುಪ್ಪಟ್ಟು ವಸೂಲಿಗೆ ನಿಂತಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಜನರು ದಂಗೆ ಏಳುವ ಸ್ಥಿತಿ ಉಂಟಾಗಿದೆ. ಅದರಲ್ಲೂ ಪ್ರಮುಖವಾಗಿ ಉಡುಪಿ ಭಾಗದ ಟ್ಯಾಕ್ಸಿ ವಾಹನಗಳ ಚಾಲಕರು ತೊಂದರೆಗೀಡಾಗಿದ್ದು, ಹೆಜಮಾಡಿ ಟೋಲ್ ಕಳೆದು ಅರ್ಧಕ್ಕೆ ಸಾಗುವುದಿದ್ದರೂ ಪೂರ್ತಿ ಹಣ ಕಟ್ಟಬೇಕಾದ ಸ್ಥಿತಿಯಿಂದ ಆಕ್ರೋಶಕ್ಕೆ ಈಡಾಗಿದ್ದಾರೆ. ಈ ರೀತಿಯ ಅವೈಜ್ಞಾನಿಕ ಮತ್ತು ಜನವಿರೋಧಿ ನೀತಿಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಹೆದ್ದಾರಿ ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಪರಿಣಾಮಕಾರಿ ಹೆಜ್ಜೆಗಳನ್ನು ಇಟ್ಟಿರುವ ತಾವು, ಸುರತ್ಕಲ್ ಟೋಲ್ ಗೇಟ್ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತೆಗೆದುಕೊಂಡ ನಿರ್ಧಾರವನ್ನು ರದ್ದುಪಡಿಸಿ ಈ ಸಮಸ್ಯೆಗೆ ಇತಿಶ್ರೀ ಹಾಕಬೇಕೆಂದು ಕೇಳಿಕೊಳ್ಳುತ್ತೇನೆಂದು ರಘುಪತಿ ಭಟ್, ದೆಹಲಿಯಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ನೀಡಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖವಾಗಿ ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿ ನಡೆದುಕೊಂಡು ಬಂದಿರುವುದು ಎನ್ನುವುದನ್ನು ಸ್ಪಷ್ಟವಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಆಮೂಲಕ ಕರಾವಳಿಯಲ್ಲಿ ಟೋಲ್ ಗೇಟನ್ನು ಸಮರ್ಥನೆ ಮಾಡಿಕೊಂಡು ಬಂದಿದ್ದ ಸಂಸದ ನಳಿನ್ ಕುಮಾರ್ ಮತ್ತು ಕೆಲವು ಶಾಸಕರಿಗೆ ರಘುಪತಿ ಬಟ್ ಟಾಂಗ್ ನೀಡಿದ್ದಾರೆ. ಅದರ ಜೊತೆಗೆ, ಕೇವಲ 90 ಕಿಮೀ ಅಂತರದಲ್ಲಿ ನಾಲ್ಕು ಟೋಲ್ ಗೇಟ್ ಹಾಕಿ ಹೆದ್ದಾರಿ ಪ್ರಾಧಿಕಾರ ಜನರನ್ನು ಲೂಟಿ ಮಾಡುತ್ತಿರುವುದನ್ನು ಉಲ್ಲೇಖ ಮಾಡಿದ್ದಾರೆ. 60 ಕಿಮೀ ಒಳಗಿನ ಟೋಲ್ ಗೇಟನ್ನು ರದ್ದುಗೊಳಿಸುವ ನಿಮ್ಮ ಭರವಸೆ ಇನ್ನೂ ಈಡೇರಿಲ್ಲ ಅನ್ನುವುದನ್ನು ಪರೋಕ್ಷವಾಗಿ ಸಚಿವರ ಗಮನಕ್ಕೆ ತಂದಿದ್ದಾರೆ.
Surathkal toll gate illegal mla raghupathi bhat mentioned in letter to minister nithin gadkari.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am