ಬ್ರೇಕಿಂಗ್ ನ್ಯೂಸ್
04-12-22 09:38 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರದ ಸ್ಟಾರ್ಟಪ್ ಯೋಜನೆ, ಅವುಗಳ ಸದುಪಯೋಗ ಪಡೆಯುವ ನಿಟ್ಟಿನಲ್ಲಿ ನಗರದ ಕೊಟ್ಟಾರದಲ್ಲಿರುವ ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ 'ಅನ್ವೇಷಣ್ ' ಹೆಸರಿನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಎಬಿವಿಪಿ ವಿದ್ಯಾರ್ಥಿ ಘಟಕದ ಸವಿಷ್ಕಾರ್ ತಂಡದ ವತಿಯಿಂದ ಡಿ.3 ಮತ್ತು 4ರಂದು ಏರ್ಪಡಿಸಿದ ಎರಡು ದಿನದ ಕಾರ್ಯಕ್ರಮದಲ್ಲಿ ಒಟ್ಟು ಐದು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎನ್ವಿಗ್ರೀನ್ ಬಯೋಟೆಕ್ ಲಿಮಿಟೆಡ್ ಸಿಇಓ ಅಶ್ವಥ್ ಹೆಗಡೆ, ಸ್ಟಾರ್ಟಪ್ ಹೇಗೆ ಆರಂಭಿಸಬೇಕು ಮತ್ತು ಯಶಸ್ವಿ ಸ್ಟಾರ್ಟಪ್ ಆಗಲು ಯಾವ ರೀತಿ ಕಾರ್ಯ ನಿರ್ವಹಿಸಬೇಕು, ಯಾವ ರೀತಿ ಫಂಡ್ ತರಬಹುದು ಎನ್ನುವ ಬಗ್ಗೆ ತಿಳಿಸಿದರು.

ಎಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಶಾಂತರಾಮ ರೈ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸವಿಷ್ಕಾರ್ ರಾಷ್ಟ್ರೀಯ ಸಹ ಸಂಚಾಲಕ ಧರಣೀಶ್ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.


ಐದು ಅವಧಿಯ ಉಪನ್ಯಾಸ ಕಾರ್ಯಕ್ರಮದಲ್ಲಿ ಯಶಸ್ವಿ ಉದ್ಯಮಿಗಳಾಗಿ ಗುರುತಿಸಲ್ಪಟ್ಟ ಗ್ರಾಮ ವಿಕಾಸ್ ಸೊಸೈಟಿ ಸಿಇಓ ಡಾ.ಜಗದೀಶ್ ಶೇಖರ್ ನಾಯ್ಕ್, ಮಾಹೆ ಪ್ರೊಫೆಸರ್ ಡಾ.ದಶರಥ್ ರಾಜ್ ಶೆಟ್ಟಿ, ಡಾ.ಅನಂತ ಪದ್ಮನಾಭ ಆಚಾರ್, ಮೋಹನ್ ಶಾಂತಿಗ್ರಾಮ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎರಡು ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ 320 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಡಿ.4ರಂದು ಸಮಾರೋಪ ಕಾರ್ಯಕ್ರಮ ನಡೆದಿದ್ದು, ಎಬಿವಿಪಿ ವಿಭಾಗ ಪ್ರಮುಖ ಕೇಶವ ಬಂಗೇರ ಪಾಲ್ಗೊಂಡಿದ್ದರು. ಎಜೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಅಂಥೋನಿ ಪಿ.ಜೆ ಅಧ್ಯಕ್ಷತೆ ವಹಿಸಿದ್ದರು.
A two-day training workshop titled 'Anveshan' was organised at AJ Institute of Engineering College, Kottara in the city to take advantage of the central government's start-up scheme for engineering students of Udupi and Dakshina Kannada districts.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm