ಬ್ರೇಕಿಂಗ್ ನ್ಯೂಸ್
04-12-22 09:38 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರದ ಸ್ಟಾರ್ಟಪ್ ಯೋಜನೆ, ಅವುಗಳ ಸದುಪಯೋಗ ಪಡೆಯುವ ನಿಟ್ಟಿನಲ್ಲಿ ನಗರದ ಕೊಟ್ಟಾರದಲ್ಲಿರುವ ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ 'ಅನ್ವೇಷಣ್ ' ಹೆಸರಿನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಎಬಿವಿಪಿ ವಿದ್ಯಾರ್ಥಿ ಘಟಕದ ಸವಿಷ್ಕಾರ್ ತಂಡದ ವತಿಯಿಂದ ಡಿ.3 ಮತ್ತು 4ರಂದು ಏರ್ಪಡಿಸಿದ ಎರಡು ದಿನದ ಕಾರ್ಯಕ್ರಮದಲ್ಲಿ ಒಟ್ಟು ಐದು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎನ್ವಿಗ್ರೀನ್ ಬಯೋಟೆಕ್ ಲಿಮಿಟೆಡ್ ಸಿಇಓ ಅಶ್ವಥ್ ಹೆಗಡೆ, ಸ್ಟಾರ್ಟಪ್ ಹೇಗೆ ಆರಂಭಿಸಬೇಕು ಮತ್ತು ಯಶಸ್ವಿ ಸ್ಟಾರ್ಟಪ್ ಆಗಲು ಯಾವ ರೀತಿ ಕಾರ್ಯ ನಿರ್ವಹಿಸಬೇಕು, ಯಾವ ರೀತಿ ಫಂಡ್ ತರಬಹುದು ಎನ್ನುವ ಬಗ್ಗೆ ತಿಳಿಸಿದರು.

ಎಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಶಾಂತರಾಮ ರೈ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸವಿಷ್ಕಾರ್ ರಾಷ್ಟ್ರೀಯ ಸಹ ಸಂಚಾಲಕ ಧರಣೀಶ್ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.


ಐದು ಅವಧಿಯ ಉಪನ್ಯಾಸ ಕಾರ್ಯಕ್ರಮದಲ್ಲಿ ಯಶಸ್ವಿ ಉದ್ಯಮಿಗಳಾಗಿ ಗುರುತಿಸಲ್ಪಟ್ಟ ಗ್ರಾಮ ವಿಕಾಸ್ ಸೊಸೈಟಿ ಸಿಇಓ ಡಾ.ಜಗದೀಶ್ ಶೇಖರ್ ನಾಯ್ಕ್, ಮಾಹೆ ಪ್ರೊಫೆಸರ್ ಡಾ.ದಶರಥ್ ರಾಜ್ ಶೆಟ್ಟಿ, ಡಾ.ಅನಂತ ಪದ್ಮನಾಭ ಆಚಾರ್, ಮೋಹನ್ ಶಾಂತಿಗ್ರಾಮ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎರಡು ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ 320 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಡಿ.4ರಂದು ಸಮಾರೋಪ ಕಾರ್ಯಕ್ರಮ ನಡೆದಿದ್ದು, ಎಬಿವಿಪಿ ವಿಭಾಗ ಪ್ರಮುಖ ಕೇಶವ ಬಂಗೇರ ಪಾಲ್ಗೊಂಡಿದ್ದರು. ಎಜೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಅಂಥೋನಿ ಪಿ.ಜೆ ಅಧ್ಯಕ್ಷತೆ ವಹಿಸಿದ್ದರು.
A two-day training workshop titled 'Anveshan' was organised at AJ Institute of Engineering College, Kottara in the city to take advantage of the central government's start-up scheme for engineering students of Udupi and Dakshina Kannada districts.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm