ಬ್ರೇಕಿಂಗ್ ನ್ಯೂಸ್
05-12-22 10:53 am Udupi Correspondent ಕರಾವಳಿ
ಕುಂದಾಪುರ, ಡಿ.5: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದರಿಂದ ಟೋಲ್ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್ಗಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್ ಗೇಟ್ ಅಂತರವೂ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನು ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.
Backward Classes Commission chairman K Jayaprakash Hegde said the merger of Hejamady and Surathkal toll gates has met with mixed response from the citizens.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm