ಬ್ರೇಕಿಂಗ್ ನ್ಯೂಸ್
05-12-22 10:53 am Udupi Correspondent ಕರಾವಳಿ
ಕುಂದಾಪುರ, ಡಿ.5: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದರಿಂದ ಟೋಲ್ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್ಗಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್ ಗೇಟ್ ಅಂತರವೂ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನು ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.
Backward Classes Commission chairman K Jayaprakash Hegde said the merger of Hejamady and Surathkal toll gates has met with mixed response from the citizens.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm