ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm