ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm