ಬ್ರೇಕಿಂಗ್ ನ್ಯೂಸ್
05-12-22 11:03 pm Mangalore Correspondent ಕರಾವಳಿ
ಮಂಗಳೂರು, ಡಿ.5 : ಎರಡು ಕುಟುಂಬಗಳ ನಡುವಿನ ಸಿವಿಲ್ ಪ್ರಕರಣ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸರು ಯುವ ವಕೀಲನಿಗೆ ಹಲ್ಲೆಗೈದು ಮನೆಯಿಂದಲೇ ಹೊತ್ತೊಯ್ದು ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ವಕೀಲರ ಸಂಘದ ಕಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು ಬಂಟ್ವಾಳ ನ್ಯಾಯಾಲಯ ಸಂಕೀರ್ಣ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಯಮುಡೂರು ಎಂಬಲ್ಲಿನ ಜಾಗದ ವಿಚಾರಕ್ಕೆ ಸಂಬಂಧಿಸಿ ಎರಡೂ ತಂಡಗಳಿಂದ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಇದರ ನಡುವೆ, ತಮ್ಮ ಜಾಗದ ವಿಚಾರದಲ್ಲಿ ಮೂಗು ತೂರಿಸುವಂತಿಲ್ಲ. ಕೋರ್ಟಿನಲ್ಲಿ ಪ್ರಕರಣ ನಡೆಯುತ್ತಿದೆ ಎನ್ನುವ ಬಗ್ಗೆ ಯುವ ವಕೀಲ ಕುಲದೀಪ್ ಶೆಟ್ಟಿ ನ್ಯಾಯಾಲಯದಿಂದ ಇಂಜೆಕ್ಷನ್ ತಂದಿದ್ದರು.
ಈ ಮಧ್ಯೆ, ಸದ್ರಿ ಸ್ಥಳದಲ್ಲಿದ್ದ ಗೇಟ್ ಕಳವಾದ ಬಗ್ಗೆ ಪುಂಜಾಲಕಟ್ಟೆ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ವಿಚಾರದಲ್ಲಿ ತರಾತುರಿಯಲ್ಲಿ ವಕೀಲ ಕುಲದೀಪ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಅಲ್ಲದೆ, ಠಾಣೆಗೆ ಬರುವಂತೆ ಕರೆ ಮಾಡಿದ್ದರು. ಆದರೆ ನಾವು ಗೇಟ್ ಕಳವು ಮಾಡಿಲ್ಲ. ಅದರ ಬಗ್ಗೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ಕುಲದೀಪ್ ಕಾನೂನು ಮಾತನಾಡಿದ್ದರು.
ಆದರೆ ಇದರ ನಡುವೆಯೇ ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಕುಮಾರ್ ಸಿಬಂದಿಯೊಂದಿಗೆ ನೇರವಾಗಿ ಕುಲದೀಪ್ ಮನೆಗೆ ಬಂದಿದ್ದರು. ಅಲ್ಲದೆ ಈ ವೇಳೆ ಪೊಲೀಸರು ಮನೆಯವರ ಎದುರಲ್ಲೇ ಕುಲದೀಪ್ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಈ ಬಗ್ಗೆ ಮನೆಯವರು ಬೇಡಿಕೊಂಡರೂ ಕ್ಯಾರೆನ್ನದೆ, ಬಲವಂತದಿಂದ ಕುಲದೀಪ್ ಅವರನ್ನು ಜೀಪಿಗೆ ತಳ್ಳಿದ್ದಾರೆ. ಅಲ್ಲದೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲಿ ನಿಮ್ಮ ವಿರುದ್ಧವೂ ಕೇಸು ದಾಖಲಿಸುತ್ತೇನೆಂದು ಎಸ್ಐ ಬೆದರಿಸಿದ್ದಾರೆ.
ಆಬಳಿಕ ಕುಲದೀಪ್ ಅವರನ್ನು ಠಾಣೆಗೆ ಕರೆದೊಯ್ದು ಗೇಟ್ ಕಳವು ಬಗ್ಗೆ ಹೇಳಿಕೆ ದಾಖಲು ಮಾಡಿದ್ದಾರೆ. ರಾತ್ರಿ ವೇಳೆ ಮನೆಗೆ ಬಂದು ದುರ್ವರ್ತನೆ ತೋರಿದ ಬಗ್ಗೆ ಕುಲದೀಪ್ ಮನೆಯವರು ವಿಡಿಯೋ ಮಾಡಿದ್ದಾರೆ. ಇದನ್ನು ಆಧರಿಸಿ ಬಂಟ್ವಾಳ ಕೋರ್ಟಿನಲ್ಲಿ ಪ್ರತ್ಯೇಕ ಕೇಸು ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಮಂಗಳೂರಿನ ವಕೀಲರ ಸಂಘದ ಸದಸ್ಯರು ಸಭೆ ಸೇರಿ ಖಂಡನೆ ವ್ಯಕ್ತಪಡಿಸಿದ್ದಾರೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸುವಂತೆ ಮೇಲಧಿಕಾರಿಗಳಿಗೆ ಆಗ್ರಹ ಮಾಡಿದ್ದಾರೆ.
Young law professional assaulted, bar council members protest against police in bantwala.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm