ಬ್ರೇಕಿಂಗ್ ನ್ಯೂಸ್
07-12-22 01:56 pm Mangalore Correspondent ಕರಾವಳಿ
ಉಳ್ಳಾಲ, ಡಿ.6: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಬೆಂಬಲ ನೀಡುತ್ತೇನೆ ಎಂದು ಕರ್ನಾಟಕ ರಾಜ್ಯಪಾಲರೂ ಮಂಗಳೂರು ವಿ.ವಿ ಕುಲಾಧಿಪತಿಗಳು ಆಗಿರುವ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನವಾದ ಮಂಗಳವಾರ (ಡಿಸೆಂಬರ್ 6) ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಬಳಿ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಮೂಲಕ ಸ್ಥಾಪಿಸಲಾಗಿರುವ ಬಾಬಾಸಾಹೇಬರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮಂಗಳಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅತ್ಯುನ್ನತ ಶಿಕ್ಷಣ ಪಡೆದಿದ್ದ ಅಂಬೇಡ್ಕರ್ ತಮ್ಮ ಸುಖ ಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ತಿದ್ದಲು ಪ್ರಯತ್ನಿಸಿದರು. ಅವರು ಸಮಾಜದ ಎಲ್ಲಾ ವರ್ಗಗಳಿಗೂ ಸೇರಿದವರು. ಎಲ್ಲರ ನಡುವೆ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಈ ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ ಎಂದರು.

ಮಹಾತ್ಮ ಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿಶ್ವವಿದ್ಯಾನಿಲಯ, ದುರ್ಗ್, ಛತ್ತೀಸ್ ಗಢ್ ಕುಲಪತಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾನಿಲಯ ಸಮಾಜ ವಿಜ್ಞಾನಗಳು, ಮಾಹೊ ಇಲ್ಲಿನ ಸಂಸ್ಥಾಪಕ ಕುಲಪತಿ ಪ್ರೊ. ಆರ್. ಎಸ್. ಕುರೀಲ್ ಅವರು ಅಂಬೇಡ್ಕರ್ ಅವರ ಜೀವನದ ಮಹತ್ತರ ಘಟ್ಟಗಳು, ಸಾಧನೆಗಳನ್ನು ವಿವರಿಸಿದರು.

ಸಂವಿಧಾನವೇ ಅಂಬೇಡ್ಕರ್ ಅವರು ಸಮಾಜದ ಸಮಸ್ಯೆಗಳಿಗೆ ನೀಡಿದ ಪರಿಹಾರ ಎಂದು ಬಣ್ಣಿಸಿದ ಅವರು, ಅಂಬೇಡ್ಕರ್ ಅವರಂತೆಯೇ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ನಾರಾಯಣ ಗುರುಗಳಿಗೆ ʼಭಾರತ ರತ್ನʼ ನೀಡಬೇಕು. ಸಾಮಾಜಿಕ ನ್ಯಾಯ ಹಾಗೂ ಬಡವರ್ಗಗಳ ಏಳಿಗೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.
Karnataka Governor Thaawar Chand Gehlot, who is also the Chancellor of Mangalore University, has assured that he will extend necessary support to the Centre if a proposal is submitted to the Central Government for setting up an Ambedkar Study Chair in Mangalore University.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm