ಬ್ರೇಕಿಂಗ್ ನ್ಯೂಸ್
07-12-22 01:56 pm Mangalore Correspondent ಕರಾವಳಿ
ಉಳ್ಳಾಲ, ಡಿ.6: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಬೆಂಬಲ ನೀಡುತ್ತೇನೆ ಎಂದು ಕರ್ನಾಟಕ ರಾಜ್ಯಪಾಲರೂ ಮಂಗಳೂರು ವಿ.ವಿ ಕುಲಾಧಿಪತಿಗಳು ಆಗಿರುವ ಥಾವರ್ ಚಂದ್ ಗೆಹ್ಲೋಟ್ ಭರವಸೆ ನೀಡಿದರು.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನವಾದ ಮಂಗಳವಾರ (ಡಿಸೆಂಬರ್ 6) ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಬಳಿ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಮೂಲಕ ಸ್ಥಾಪಿಸಲಾಗಿರುವ ಬಾಬಾಸಾಹೇಬರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮಂಗಳಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತ್ಯುನ್ನತ ಶಿಕ್ಷಣ ಪಡೆದಿದ್ದ ಅಂಬೇಡ್ಕರ್ ತಮ್ಮ ಸುಖ ಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ತಿದ್ದಲು ಪ್ರಯತ್ನಿಸಿದರು. ಅವರು ಸಮಾಜದ ಎಲ್ಲಾ ವರ್ಗಗಳಿಗೂ ಸೇರಿದವರು. ಎಲ್ಲರ ನಡುವೆ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಈ ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ ಎಂದರು.
ಮಹಾತ್ಮ ಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿಶ್ವವಿದ್ಯಾನಿಲಯ, ದುರ್ಗ್, ಛತ್ತೀಸ್ ಗಢ್ ಕುಲಪತಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾನಿಲಯ ಸಮಾಜ ವಿಜ್ಞಾನಗಳು, ಮಾಹೊ ಇಲ್ಲಿನ ಸಂಸ್ಥಾಪಕ ಕುಲಪತಿ ಪ್ರೊ. ಆರ್. ಎಸ್. ಕುರೀಲ್ ಅವರು ಅಂಬೇಡ್ಕರ್ ಅವರ ಜೀವನದ ಮಹತ್ತರ ಘಟ್ಟಗಳು, ಸಾಧನೆಗಳನ್ನು ವಿವರಿಸಿದರು.
ಸಂವಿಧಾನವೇ ಅಂಬೇಡ್ಕರ್ ಅವರು ಸಮಾಜದ ಸಮಸ್ಯೆಗಳಿಗೆ ನೀಡಿದ ಪರಿಹಾರ ಎಂದು ಬಣ್ಣಿಸಿದ ಅವರು, ಅಂಬೇಡ್ಕರ್ ಅವರಂತೆಯೇ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ನಾರಾಯಣ ಗುರುಗಳಿಗೆ ʼಭಾರತ ರತ್ನʼ ನೀಡಬೇಕು. ಸಾಮಾಜಿಕ ನ್ಯಾಯ ಹಾಗೂ ಬಡವರ್ಗಗಳ ಏಳಿಗೆಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು.
Karnataka Governor Thaawar Chand Gehlot, who is also the Chancellor of Mangalore University, has assured that he will extend necessary support to the Centre if a proposal is submitted to the Central Government for setting up an Ambedkar Study Chair in Mangalore University.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm