ಬ್ರೇಕಿಂಗ್ ನ್ಯೂಸ್
08-12-22 11:04 pm Udupi Correspondent ಕರಾವಳಿ
ಉಡುಪಿ, ಡಿ.8: ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಶವ ರೈಲು ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದಾರೆ. ತನಿಖೆಯಲ್ಲಿ ವೈದ್ಯರದ್ದು ಬಹುತೇಕ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ.
ನ.8ರಂದು ಕೃಷ್ಣಮೂರ್ತಿ, ಕಾಸರಗೋಡಿನಿಂದ ಮಂಗಳೂರಿಗೆ ಬಂದು ಅಲ್ಲಿಂದ ಉಡುಪಿ, ಕುಂದಾಪುರಕ್ಕೆ ಬಸ್ ನಲ್ಲಿ ತೆರಳಿರುವುದು ವಿವಿಧ ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಕಂಡುಬಂದಿದೆ. ಮಂಗಳೂರಿನಿಂದ ಕುಂದಾಪುರಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಆಗಮಿಸಿದ್ದು, ಮಧ್ಯಾಹ್ನ 12.30ಕ್ಕೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆನಂತರ ದ್ವಾರಕಾ ಹೊಟೇಲ್ ಗೆ ತೆರಳಿರುವುದು ಕಂಡುಬಂದಿದೆ.
ವೈದ್ಯರು ಒಬ್ಬಂಟಿಯಾಗಿಯೇ ನಡೆದುಕೊಂಡು ಹೋಗುವುದು, ಮಂಗಳೂರಿನ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವುದು ಕಂಡುಬಂದಿದೆ. ಒಂದು ಬ್ಯಾಗ್ ಹಾಕ್ಕೊಂಡು ಒಬ್ಬಂಟಿಯಾಗೇ ತೆರಳುತ್ತಿದ್ದರು. ಈ ನಡುವೆ, ಬದಿಯಡ್ಕದಿಂದ ಹೊರಡುವಾಗ ಇದ್ದ ಅಂಗಿಯ ಬದಲು ಶವದಲ್ಲಿ ಬೇರೆ ಅಂಗಿ ಇದ್ದುದರಿಂದ ಶಂಕೆ ವ್ಯಕ್ತವಾಗಿತ್ತು. ನಡುವೆ ಶರ್ಟ್ ಬದಲಾವಣೆ ಮಾಡಿದ್ದರೇ ಎನ್ನುವ ಬಗ್ಗೆ ಪೊಲೀಸರು ಸಿಸಿಟಿವಿಗಳನ್ನು ಗಮನಿಸುತ್ತಿದ್ದಾರೆ. ಆದರೆ ಜೊತೆಗಿದ್ದ ಬ್ಯಾಗ್ ಪೊಲೀಸರಿಗೆ ಲಭಿಸಿಲ್ಲ. ಅಲ್ಲದೆ, ಅವರು ಧರಿಸಿದ್ದ ಬೆಲ್ಟ್ ಮತ್ತು ವಾಚ್ ಪ್ರತ್ಯೇಕವಾಗಿ ಸಿಕ್ಕಿದ್ದು ವೈದ್ಯರೇ ಅದನ್ನು ಬೇರೆ ಬೇರೆ ಕಡೆ ಹಾಕಿದ್ದರೇ ಎಂಬ ಶಂಕೆಯಿದೆ. ಅಲ್ಲದೆ, ವೈದ್ಯರು ಬದಿಯಡ್ಕದಲ್ಲಿ ಹಾಕ್ಕೊಂಡು ಹೋಗಿದ್ದ ಶರ್ಟ್ ಎಲ್ಲಿಟ್ಟಿದ್ದಾರೆ ಎಂಬ ಬಗ್ಗೆಯೂ ಸರಿಯಾದ ಮಾಹಿತಿ ದೊರೆತಿಲ್ಲ.
ಕೃಷ್ಣಮೂರ್ತಿಯವರು ಕುಂದಾಪುರದ ಶಾಸ್ತ್ರಿ ಸರ್ಕಲ್ ನಿಂದ ರೈಲ್ವೇ ಸ್ಟೇಶನ್ ಬಳಿಗೆ ತೆರಳುವ ಹಾದಿಯಲ್ಲಿ ಇಬ್ಬರನ್ನು ಮಾತನಾಡಿಸಿದ್ದು ಏನೋ ಮಾಹಿತಿ ಕೇಳಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಶವ ದೊರೆತ ಬಳಿಕ ಮಣಿಪಾಲದಲ್ಲಿ ಪೋಸ್ಟ್ ಮಾರ್ಟಂ ನಡೆಸಿದ್ದು ಅದರ ವರದಿ ಇನ್ನೂ ಬಂದಿಲ್ಲ. ಘಟನೆ ಬಗ್ಗೆ ಫಾರೆನ್ಸಿಕ್ ವರದಿ ಬಂದ ಬಳಿಕ ಅದನ್ನು ತಾಳೆಹಾಕಿ ಪೊಲೀಸರು ನಿರ್ಧಾರಕ್ಕೆ ಬರಲಿದ್ದಾರೆ. ಆಸ್ತಿ ವಿಚಾರದಲ್ಲಿ ವಿವಾದ ಮತ್ತು ಮಹಿಳೆಯನ್ನು ಮುಂದಿಟ್ಟು ಟ್ರಾಪ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಘಟನೆ ಬಗ್ಗೆ ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದು, ಐದು ಮಂದಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
The investigation of finding the mortal remains of dentist of Badiyadka Dr Krishnamurthy on the railway tracks near Kundapur is almost over. High sources in the police have confirmed that this is a case of suicide. However, Kasargod police have continued their investigation. The deceased doctor, who went to Kundapur from Mangaluru KSRTC bus stand at around 12.30 pm on November 8 arrived at Shastri Circle of Kundapur. Then he went to Dwaraka Hotel in the town.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm