ಬ್ರೇಕಿಂಗ್ ನ್ಯೂಸ್
09-12-22 11:37 am Mangalore Correspondent ಕರಾವಳಿ
ಮಂಗಳೂರು, ಡಿ.9 : ನಗರದ ಕಾಲೇಜೊಂದರ ಮುಸ್ಲಿಂ ವಿದ್ಯಾರ್ಥಿಗಳು ಹೆಣ್ಮಕ್ಕಳ ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಿದ್ದು ಅದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಮುದಾಯದ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ.
ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಘಟಕದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಕ್ಕೆ ಧಾರ್ಮಿಕ ಕಟ್ಟುಪಾಡುಗಳಿಗೆ ಧಕ್ಕೆಯಾಗಿದೆ ಎಂದು ಜಾಲತಾಣದಲ್ಲಿ ಕೆಲವರು ಆಕ್ಷೇಪ ಎತ್ತಿದ್ದಾರೆ. ಜಾಲತಾಣದಲ್ಲಿ ಡ್ಯಾನ್ಸ್ ಮಾಡಿರುವ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮತ್ತು ಕಾಲೇಜಿನ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ.
ಮುಸ್ಲಿಂ ಸಮುದಾಯದ ಆಕ್ರೋಶದ ಹಿನ್ನೆಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಅಲ್ಲದೆ, ಈ ಬಗ್ಗೆ ಪ್ರಭಾರ ಪ್ರಾಂಶುಪಾಲ ಡಾ.ಸುಧೀರ್ ಸ್ಪಷ್ಟನೆ ಕೊಟ್ಟಿದ್ದು ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಡ್ಯಾನ್ಸ್ ಮಾಡಲಾಗಿತ್ತು. ಅದು ಕಾಲೇಜಿನ ಅಧಿಕೃತ ಕಾರ್ಯಕ್ರಮ ಆಗಿರಲಿಲ್ಲ. ಹಾಗಿದ್ದರೂ ಡ್ಯಾನ್ಸ್ ಮಾಡಿರುವ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಆಂತರಿಕ ತನಿಖೆ ನಡೆಸಲಾಗುವುದು. ಯಾವುದೇ ಸಮುದಾಯಕ್ಕೆ ಹಾನಿಯಾಗುವ ರೀತಿ ಕಾರ್ಯಕ್ರಮ ನಡೆಸುವುದಕ್ಕೆ ಅಥವಾ ಸಮಾಜದ ಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿ ನಡೆದುಕೊಳ್ಳುವುದಕ್ಕೆ ಕಾಲೇಜಿನ ಪ್ರೋತ್ಸಾಹ ಇರುವುದಿಲ್ಲ ಎಂದು ಹೇಳಿದ್ದಾರೆ.
16 ಸೆಕೆಂಡಿನ ವಿಡಿಯೋದಲ್ಲಿ ವಿದ್ಯಾರ್ಥಿಗಳು ಸ್ಟೇಜ್ ನಲ್ಲಿ ಬುರ್ಖಾ ಧರಿಸಿ ಕುಣಿದಿದ್ದಾರೆ. ಇದಕ್ಕೆ ಮುಸ್ಲಿಂ ಸಮುದಾಯದ ಕೆಲವರಿಂದ ಆಕ್ಷೇಪ ಕೇಳಿಬಂದಿದೆ.
#Mangalore #Muslim students wearing #burqa and dancing goes viral, Four boy students of #StJosephcollege suspended #BREAKING pic.twitter.com/eEB3XecCcc
— Headline Karnataka (@hknewsonline) December 9, 2022
Mangalore Muslim students wearing burqa and dancing goes viral, Four boy students of St Joseph Engineering College suspended. The programme had taken place in the college on the evening of Wednesday. After the programme was over, students of the college got on to the dais and danced wearing burqas.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm