ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm