ಬ್ರೇಕಿಂಗ್ ನ್ಯೂಸ್
10-12-22 09:38 pm Mangalore Correspondent ಕರಾವಳಿ
ಮಂಗಳೂರು, ಡಿ.10: ಶಿರಾಡಿ ಘಾಟ್ ರಸ್ತೆ ಅವ್ಯವಸ್ಥೆ ಬಗ್ಗೆ ವಾರದೊಳಗೆ ಹೆದ್ದಾರಿ ಅಧಿಕಾರಿಗಳ ಸಭೆ ಕರೆಯುತ್ತೇನೆ. ಯಾಕೆ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ದುರಸ್ತಿ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಕೆಲಸಗಳು ಇನ್ನೂ ನಡೆಯುತ್ತಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ವಾರದೊಳಗೆ ಈ ಬಗ್ಗೆ ವಿಶೇಷ ಸಭೆ ಕರೆಯುತ್ತೇನೆ. ಘಾಟ್ ರಸ್ತೆ ದುರಸ್ತಿ ಆಗದ ಕಾರಣ ತಿಳಿಯುತ್ತೇನೆ. ಶಿರಾಡಿ ಘಾಟ್ ದುರಸ್ತಿಗೆ ಮೂರು ಹಂತದ ಪ್ರಕ್ರಿಯೆಗಳ ಮಾತುಕತೆಯಾಗುತ್ತಿದೆ. ತಾತ್ಕಾಲಿಕ ಡಾಂಬರೀಕರಣ, ವೈಟ್ ಟಾಪಿಂಗ್, ಸುರಂಗ ಮಾಡುವ ಪ್ರಕ್ರಿಯೆ ಮಾತುಕತೆಯಲ್ಲಿದೆ. ಈ ಬಗ್ಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ಮಾಡುತ್ತೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮಹಾರಾಷ್ಟ್ರ-ಕರ್ನಾಟಕ ಗಡಿ ಬಿಕ್ಕಟ್ಟಿನ ಕುರಿತ ಪ್ರಶ್ನೆಗೆ, ಸದ್ಯಕ್ಕೆ ಗಡಿಯಲ್ಲಿ ಎಲ್ಲಾ ಬಸ್ ಗಳ ಓಡಾಟ ನಡೆಯುತ್ತಿದೆ. ಈ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಹಲವು ಸೂಚನೆ ನೀಡಿದ್ದೇವೆ. ಡಿ.14ರಂದು ಕೇಂದ್ರ ಗೃಹಮಂತ್ರಿಗಳು ಎರಡು ರಾಜ್ಯದ ಸಿಎಂಗಳ ಸಭೆ ಕರೆದಿದ್ದಾರೆ. ಮುಂದಿನ ಸೋಮವಾರ ಕೇಂದ್ರ ಗೃಹ ಸಚಿವರನ್ನು ರಾಜ್ಯದ ಸಂಸದರು ಭೇಟಿಯಾಗಿ ಪರಿಸ್ಥಿತಿಯ ವಿವರ ನೀಡಲಿದ್ದಾರೆ. ಕರ್ನಾಟಕದ ಹಿತ ಮತ್ತು ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಹಿತ ಕಾಯೋದು ಸರ್ಕಾರದ ಆದ್ಯತೆಯಾಗಿದೆ.
ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಸಮಾವೇಶ ಮಾಡಲು ಪ್ರಯತ್ನ ಮಾಡುತ್ತಾರೆ. ಪ್ರತೀ ಬಾರಿಯೂ ಅವಕಾಶ ಕೊಡೋದಿಲ್ಲ, ಈ ಬಾರಿಯೂ ಅವಕಾಶ ಕೊಡೋದಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಪದೇ ಪದೇ ಉಗ್ರರ ಉಪಟಳ ಆಗ್ತಾ ಇದೆ, ಏನು ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ, ರಾಜ್ಯದಲ್ಲಿ ಉಗ್ರರ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಂಡಿದ್ದೇವೆ. ಹದಿಮೂರು ಸ್ಲೀಪರ್ ಸೆಲ್ ಗಳನ್ನು ಗುರುತಿಸಿ ಶಂಕಿತರನ್ನು ಜೈಲಿಗೆ ಕಳುಹಿಸಿದ್ದೇವೆ. ತಮಿಳುನಾಡಿನಲ್ಲಿ ಕಾರ್ಯಾಚರಣೆ ಮಾಡಲು ಯತ್ನಿಸಿದವರನ್ನೂ ಸೆರೆ ಹಿಡಿದಿದ್ದೇವೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ. ಅವರಿಗೆ ವಿದೇಶಗಳಿಂದ ಸಂಪರ್ಕ ಇರುವುದನ್ನೂ ಪತ್ತೆಹಚ್ಚಿ ಆ ಬಗ್ಗೆ ಕೇಂದ್ರಕ್ಕೆ ವರದಿ ಕಳುಹಿಸುತ್ತೇವೆ. ಉಗ್ರರ ಲಿಂಕ್ ಬಗ್ಗೆ ಸಮಗ್ರ ಮಾಹಿತಿ ಪಡೆದು ರಾಜ್ಯ ಮತ್ತು ಕೇಂದ್ರದ ತನಿಖಾ ಏಜನ್ಸಿಗಳು ಒಟ್ಟಿಗೆ ಕೆಲಸ ಮಾಡುತ್ತವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
A special meeting will be held with the officials of the National Highways Authority of India within a week to provide a permanent solution to the Shiradi Ghat Road, said Chief Minister Basavaraj Bommai.Talking to reporters here on Saturday, he said the meeting will discuss asphalting, white topping and tunnel within a week and come out with a solution.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm