ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm