ಬ್ರೇಕಿಂಗ್ ನ್ಯೂಸ್
11-12-22 04:49 pm Mangalore Correspondent ಕರಾವಳಿ
ಉಳ್ಳಾಲ, ಡಿ.11 : ಸೂಪರ್ ಹಿಟ್ ಕಾಂತಾರ ಚಿತ್ರದ ಗುರುವ ಪಾತ್ರಧಾರಿ ಖ್ಯಾತಿಯ ಸ್ವರಾಜ್ ಶೆಟ್ಟಿ ಚಿತ್ರಕಥೆ, ನಿರ್ದೇಶನದೊಂದಿಗೆ ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಕನ್ನಡ ಚಿತ್ರಕ್ಕೆ ಹರೇಕಳ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಭಾನುವಾರ ಮುಹೂರ್ತ ಸಮಾರಂಭ ನೆರವೇರಿತು.
ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಹೊಸ ಚಿತ್ರಕ್ಕೆ ಕ್ಲಾಪ್ ಮಾಡಿದರು. ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ಮಾಡಿದರು. ಚಿತ್ರ ನಿರ್ದೇಶಕ, ನಾಯಕ ನಟ ಸ್ವರಾಜ್ ಶೆಟ್ಟಿ ಮಾತನಾಡಿ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕಿದೆ. ಕಾಂತಾರ ಚಿತ್ರದ ಗುರುವ ಪಾತ್ರದ ಮೂಲಕ ಕನ್ನಡಿಗರು ನನ್ನನ್ನು ಗುರುತಿಸಿದ್ದಾರೆ. ಹೊಸ ಚಿತ್ರ ಕಂಪ್ಲೀಟ್ ಫ್ಯಾಮಿಲಿ ಎಂಟರ್ ಟೈನರ್ ಆಗಿದ್ದು ಪತಿ-ಪತ್ನಿ ನಡುವಿನ ನವಿರಾದ ಪ್ರೇಮಕಥೆಯನ್ನು ಒಳಗೊಂಡಿದೆ. ಚಿತ್ರಕಥೆ, ಸಂಭಾಷಣೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯೂ ನನ್ನ ಮೇಲಿದೆ. ಮಂಗಳೂರು ಸುತ್ತಮುತ್ತಲಲ್ಲೇ 20-25 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಚಿತ್ರದಲ್ಲಿ "ಕಾಂತಾರ" ಚಿತ್ರದ ಬಹುತೇಕ ಕಲಾವಿದರು ಬಣ್ಣ ಹಚ್ಚಲಿದ್ದಾರೆ ಎಂದರು.



ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಚಿತ್ರಕಥೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಮ್ಮ ನಿಮ್ಮೆಲ್ಲರ ಶುಭ ಹಾರೈಕೆ ಇರಲಿ ಎಂದರು.
ಸ್ವರಾಜ್ ಶೆಟ್ಟಿಗೆ ನಾಯಕಿಯಾಗಿ ಶಿವಾನಿ ರೈ ಅಭಿನಯಿಸುತ್ತಿದ್ದಾರೆ. ಶಿವಾನಿ ಅವರ ಮೊದಲ ಕನ್ನಡ ಚಿತ್ರ "ಅಭಿರಾಮ ಚಂದ್ರ" ಇನ್ನಷ್ಟೇ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕರಾದ ಭಾಗ್ಯರಾಜ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸಂಕಲನಕಾರ ಗಣೇಶ್ ನೀರ್ಚಾಲ್, ಕೆಮರಾ ಮ್ಯಾನ್ ರೂಪೇಶ್ ಷಾಜಿ, ಸಂಗೀತ ನಿರ್ದೇಶಕ ವಿನೋದ್ ರಾಜ್ ಕೋಕಿಲ, ಕಲಾ ನಿರ್ದೇಶಕ ರಾಜೇಶ್, ಸಹನಿರ್ದೇಶಕ ಮಹಾನ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ರಕ್ಷಾ ರಾಜ್ ಶೆಟ್ಟಿ, ರಾಧಾಕೃಷ್ಣ, ಪ್ರತಿಮಾ ರೈ ಮೊದಲಾದವರು ಉಪಸ್ಥಿತರಿದ್ದರು.
Mangalore Muhurtam held at temple for upcoming kannada movie of Max creation.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm