ಬ್ರೇಕಿಂಗ್ ನ್ಯೂಸ್
11-12-22 04:49 pm Mangalore Correspondent ಕರಾವಳಿ
ಉಳ್ಳಾಲ, ಡಿ.11 : ಸೂಪರ್ ಹಿಟ್ ಕಾಂತಾರ ಚಿತ್ರದ ಗುರುವ ಪಾತ್ರಧಾರಿ ಖ್ಯಾತಿಯ ಸ್ವರಾಜ್ ಶೆಟ್ಟಿ ಚಿತ್ರಕಥೆ, ನಿರ್ದೇಶನದೊಂದಿಗೆ ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಕನ್ನಡ ಚಿತ್ರಕ್ಕೆ ಹರೇಕಳ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಭಾನುವಾರ ಮುಹೂರ್ತ ಸಮಾರಂಭ ನೆರವೇರಿತು.
ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಹೊಸ ಚಿತ್ರಕ್ಕೆ ಕ್ಲಾಪ್ ಮಾಡಿದರು. ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕ್ಯಾಮರಾ ಚಾಲನೆ ಮಾಡಿದರು. ಚಿತ್ರ ನಿರ್ದೇಶಕ, ನಾಯಕ ನಟ ಸ್ವರಾಜ್ ಶೆಟ್ಟಿ ಮಾತನಾಡಿ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕಿದೆ. ಕಾಂತಾರ ಚಿತ್ರದ ಗುರುವ ಪಾತ್ರದ ಮೂಲಕ ಕನ್ನಡಿಗರು ನನ್ನನ್ನು ಗುರುತಿಸಿದ್ದಾರೆ. ಹೊಸ ಚಿತ್ರ ಕಂಪ್ಲೀಟ್ ಫ್ಯಾಮಿಲಿ ಎಂಟರ್ ಟೈನರ್ ಆಗಿದ್ದು ಪತಿ-ಪತ್ನಿ ನಡುವಿನ ನವಿರಾದ ಪ್ರೇಮಕಥೆಯನ್ನು ಒಳಗೊಂಡಿದೆ. ಚಿತ್ರಕಥೆ, ಸಂಭಾಷಣೆಯ ಜೊತೆಗೆ ನಿರ್ದೇಶನದ ಜವಾಬ್ದಾರಿಯೂ ನನ್ನ ಮೇಲಿದೆ. ಮಂಗಳೂರು ಸುತ್ತಮುತ್ತಲಲ್ಲೇ 20-25 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಚಿತ್ರದಲ್ಲಿ "ಕಾಂತಾರ" ಚಿತ್ರದ ಬಹುತೇಕ ಕಲಾವಿದರು ಬಣ್ಣ ಹಚ್ಚಲಿದ್ದಾರೆ ಎಂದರು.



ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಚಿತ್ರಕಥೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಮ್ಮ ನಿಮ್ಮೆಲ್ಲರ ಶುಭ ಹಾರೈಕೆ ಇರಲಿ ಎಂದರು.
ಸ್ವರಾಜ್ ಶೆಟ್ಟಿಗೆ ನಾಯಕಿಯಾಗಿ ಶಿವಾನಿ ರೈ ಅಭಿನಯಿಸುತ್ತಿದ್ದಾರೆ. ಶಿವಾನಿ ಅವರ ಮೊದಲ ಕನ್ನಡ ಚಿತ್ರ "ಅಭಿರಾಮ ಚಂದ್ರ" ಇನ್ನಷ್ಟೇ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕರಾದ ಭಾಗ್ಯರಾಜ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸಂಕಲನಕಾರ ಗಣೇಶ್ ನೀರ್ಚಾಲ್, ಕೆಮರಾ ಮ್ಯಾನ್ ರೂಪೇಶ್ ಷಾಜಿ, ಸಂಗೀತ ನಿರ್ದೇಶಕ ವಿನೋದ್ ರಾಜ್ ಕೋಕಿಲ, ಕಲಾ ನಿರ್ದೇಶಕ ರಾಜೇಶ್, ಸಹನಿರ್ದೇಶಕ ಮಹಾನ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ರಕ್ಷಾ ರಾಜ್ ಶೆಟ್ಟಿ, ರಾಧಾಕೃಷ್ಣ, ಪ್ರತಿಮಾ ರೈ ಮೊದಲಾದವರು ಉಪಸ್ಥಿತರಿದ್ದರು.
Mangalore Muhurtam held at temple for upcoming kannada movie of Max creation.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm