ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm