ಬ್ರೇಕಿಂಗ್ ನ್ಯೂಸ್
12-12-22 10:37 pm Mangalore Correspondent ಕರಾವಳಿ
ಮಂಗಳೂರು, ಡಿ.12: ಡೀಮ್ಡ್ ಫಾರೆಸ್ಟ್ ತೆರವುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇಂತಹ ರಾಜಕೀಯ ಹೇಳಿಕೆಗಳಿಂದ ಡೀಮ್ಡ್ ಫಾರೆಸ್ಟ್ ಬದಲಾವಣೆ ಮಾಡಲು ಸಾಧ್ಯವಾಗಲ್ಲ ಎಂದು ಮಾಜಿ ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ನಷ್ಟು ಡೀಮ್ಡ್ ಫಾರೆಸ್ಟ್ ಕಂದಾಯ ಇಲಾಖೆಗೆ ಬಿಟ್ಟು ಕೊಡಲು ಸರ್ವೆ ನಡೆಸಲಾಗಿತ್ತು. ರಕ್ಷಿತಾರಣ್ಯ ಎಂದು ಘೋಷಿಸಲಾಗಿರುವ ಭೂಮಿಯ ಬಗ್ಗೆ 2015ರಲ್ಲಿ ಜಂಟಿ ಸರ್ವೆ ನಡೆಸಲಾಗಿದ್ದು, ಜನವಸತಿ ಇರುವ ಕಡೆಗಳಲ್ಲಿ ತೆರವು ಮಾಡಲು ಗುರುತು ಹಾಕಲಾಗಿತ್ತು. ಈ ರೀತಿಯ ಸಮಸ್ಯೆ ಹೆಚ್ಚಿರುವುದು ಕರಾವಳಿಯ ಜಿಲ್ಲೆಗಳಲ್ಲಿ. ಆದರೆ, ಅದಿನ್ನೂ ಕಾರ್ಯಗತ ಆಗಿಲ್ಲ. ರಾಜಕೀಯ ನಾಯಕರು ತಾವು ಮಾಡಿದ್ದೇವೆಂದು ಬಡಾಯಿ ಕೊಚ್ಚಿಕೊಂಡ ಮಾತ್ರಕ್ಕೆ ಈ ಸಮಸ್ಯೆ ನಿವಾರಣೆ ಆಗುವುದಿಲ್ಲ.
ಡೀಮ್ಡ್ ಫಾರೆಸ್ಟ್ ಭೂಮಿಯನ್ನು ತೆರವುಗೊಳಿಸಲು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಅಂಕಿತ ಬೇಕಾಗುತ್ತದೆ. ಆನಂತರ, ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗುತ್ತದೆ. ಸುಪ್ರೀಂ ಕೋರ್ಟಿನಲ್ಲಿ ಈ ಕುರಿತ ವ್ಯಾಜ್ಯ ಇರುವುದರಿಂದ ಹೇಳುತ್ತಿದ್ದೇನೆ. ನಾವು ಮಾಡಿದ್ದೇವೆಂದು ಹೇಳಿಕೆ ನೀಡಿದ ಮಾತ್ರಕ್ಕೆ ಸಮಸ್ಯೆ ನಿವಾರಣೆ ಆಗುವುದಿಲ್ಲ. ಬಹಳಷ್ಟು ಕಡೆ ಹಿಂದಿನ ಕಾಲದಲ್ಲಿ ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿರುವ ಜಾಗದಲ್ಲಿ ಜನವಸತಿ ಇದೆ. ಗದ್ದೆ, ತೋಟಗಳಿವೆ. ಇಂಥವನ್ನು ತೆರವು ಮಾಡುವುದಕ್ಕಾಗಿ ಜಂಟಿ ಸರ್ವೆ ಮಾಡಲಾಗಿತ್ತು. ಆ ಭೂಮಿಯನ್ನು ಕಂದಾಯ ಭೂಮಿಯೆಂದು ಪರಿವರ್ತಿಸಲು ಕಾನೂನು ತೊಡಕುಗಳಿದ್ದು, ಸೂಕ್ತವಾಗಿ ಸ್ಪಂದಿಸಿದಲ್ಲಿ ಮಾತ್ರ ಸಾಧ್ಯ ಎಂದು ರಮಾನಾಥ ರೈ ಅಭಿಪ್ರಾಯಪಟ್ಟರು.
ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಿದ್ದ ವಂದಿತಾ ಶರ್ಮ ಈಗ ಮುಖ್ಯ ಕಾರ್ಯದರ್ಶಿ ಆಗಿದ್ದಾರೆ. ಡೀಮ್ಡ್ ಫಾರೆಸ್ಟ್ ಬಗ್ಗೆ ತಿಳಿದುಕೊಂಡವರಿದ್ದಾರೆ. ಪ್ರಯತ್ನ ಪಟ್ಟರೆ, ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಸಾಧ್ಯ ಎಂದು ರಮಾನಾಥ ರೈ ಹೇಳಿದರು. ದ.ಕ. ಜಿಲ್ಲೆಯಲ್ಲಿ ಚುನಾವಣೆಗೇನು ತಯಾರಿ ನಡೆದಿದೆ ಎಂದು ಕೇಳಿದ್ದಕ್ಕೆ, ನಾವು ಚುನಾವಣೆಗೆ ರೆಡಿ ಆಗಿದ್ದೇವೆ. ನಮ್ಮಲ್ಲಿ ಹೆಚ್ಚು ಅರ್ಜಿ ಹಾಕಿದ್ದಾರೆ ಅಂದ್ರೆ, ಗೆಲ್ಲುವ ಸಾಧ್ಯತೆ ಹೆಚ್ಚಿದೆಯೆಂದರ್ಥ. ಹಿಂದೆ ಎಂಟರಲ್ಲಿ ಏಳನ್ನು ಕಾಂಗ್ರೆಸ್ ಗೆದ್ದಿತ್ತು. ಆನಂತರ, ಕಳೆದ ಚುನಾವಣೆಯಲ್ಲಿ ಬಿಜೆಪಿ ಏಳು ಸ್ಥಾನ ಗೆದ್ದಿತ್ತು. ಈ ಬಾರಿ ಮತ್ತೆ ಎಂಟರಲ್ಲಿ ಏಳು ಅಲ್ಲ, ಎಂಟು ಸ್ಥಾನ ಗೆಲ್ಲಬೇಕಾಗಿದೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ನವೀನ್ ಡಿಸೋಜ, ಶಶಿಧರ ಹೆಗ್ಡೆ, ಪ್ರತಿಭಾ ಕುಳಾಯಿ, ಅಪ್ಪಿ ಮತ್ತಿತರರಿದ್ದರು.
Former Minister B. Ramanath Rai on Monday said statements by the Chief Minister and his colleagues to get 6 lakh hectares of land from the ‘deemed forest’ tag were only political, whereas the necessary order has to come from the Supreme Court.Speaking to reporters here, Mr. Rai said releasing deemed forestland for agriculture and other purposes was not as easy as making tall claims. He said when he was the Forest Minister, he had constituted a joint committee comprising officials from the forest and revenue departments to identify deemed forest lands that could be released from the tag.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
25-06-25 11:11 pm
Mangalore Correspondent
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm