ಬ್ರೇಕಿಂಗ್ ನ್ಯೂಸ್
12-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.12 : ರಾಜ್ಯದಲ್ಲಿ ಪಂಚರತ್ನ ರಥಯಾತ್ರೆಯ ಪೂರ್ವ ತಯಾರಿಯಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಜಾಥಾಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಗೌಡ ರಥಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಬೆಂಬಲ ದೊರಕುತ್ತಿದ್ದು ವಿರೋಧ ಪಕ್ಷಗಳು ಇದರಿಂದ ಭೀತಿಗೊಳಗಾಗಿದ್ದಾರೆ ಎಂದು ಜಾಕೆ ಮಾಧವ ಗೌಡ ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಮತ್ತು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ ಬಿಜೆಪಿ ಪಕ್ಷ ಜನರಲ್ಲಿ ಭೀತಿ, ದ್ವೇಷ ಹರಡುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದೆ. ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ ಎಂದು ಹೇಳಿದರು. ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್, ಯುವನಾಯಕ ಪೈಜಲ್, ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ, ರವೀಂದ್ರ ಉಳ್ಳಾಲ, ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಯುವ ಜನತಾದಳ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಿಲಾಲ್ ಮಹಮದ್ ಉಪಸ್ಥಿತರಿದ್ದರು.
HD Kumaraswamy will surely become next cm of Karnataka, Madava Gowda.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm